9:36 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಬಿಜೆಪಿಯಿಂದ ಯುಗಾದಿ ಸೀರೆ ಹಂಚಿಕೆ: ಗ್ರಾಮಸ್ಥರ ಆರೋಪ; ಸೀರೆಗೆ ಬೆಂಕಿ ಹಚ್ಚಿ ಮತದಾರನಿಂದ ಆಕ್ರೋಶ

08/03/2023, 19:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಭಕ್ತರಹಳ್ಳಿ, ಮಲ್ಲೇನಹಳ್ಳಿ ಬಿಜೆಪಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ಗ್ರಾಮಸ್ಥರಿಗೆ ಸೀರೆ ಹಂಚಿಕೆ ಆರೋಪ ಕೇಳಿ ಬಂದಿದ್ದು, ವ್ಯಕ್ತಿಯೊಬ್ಬರು ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೀರೆ ಸುಟ್ಟ ವ್ಯಕ್ತಿ ಬಿಜೆಪಿ ಮುಖಂಡರಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇತರ ಮತದಾರರು ಕೂಡ ಸಾಥ್ ನೀಡಿದ್ದಾರೆ. ಕೊರೋನಾ ವೇಳೆ 1 ಕೆಜಿ ಅಕ್ಕಿ‌ ಕೊಡುವ ಯೋಗ್ಯತೆಯಿಲ್ಲದ ನೀವು ಸೀರೆ ಹಂಚಿಕೆ ಮಾಡ್ತೀರಾ ಎಂದು ಮತದಾರರು ಬಿಜೆಪಿ ಮುಖಂಡರಿಗೆ ಮಂಗಳಾರತಿ ಎತ್ತಿದ್ದಾರೆ.
ಯುಗಾದಿ ಹಬ್ಬಕ್ಕಾಗಿ ಬಿಜೆಪಿಯಿಂದ ಮತದಾರರಿಗೆ ಸೀರೆ ಗಿಫ್ಟ್ ನೀಡಲಾಗಿದೆ ಎನ್ನಲಾಗಿದೆ. ಆದರೆ ಸೀರೆ ಹಂಚಿಕೆ ಮಾಡಿದ್ದಕ್ಕೆ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೀರೆಯನ್ನ ರಸ್ತೆಯಲ್ಲಿ ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಗಿದೆ.


ಎಲೆಕ್ಷನ್ ಬಂತು ಅಂತ ಸೀರೆ ಹಂಚಿಕೆ ಮಾಡ್ತೀರಾ
ಶಾಸಕ ಸಿ.ಟಿ.ರವಿ ಬೆಂಬಲಿಗರಿಗೆ ಮತದಾರರು ಕ್ಲಾಸ್ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು