4:17 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಇದೇನು ಕೊರೊನಾ ಮೆರವಣಿಗೆಯೇ ?: ಸರಕಾರದ ಗೈಡ್ ಲೈನ್ಸ್ ಸಚಿವ ಲಿಂಬಾವಳಿ, ಶಾಸಕ ಸುನಿಲ್ ಗೆ ಅನ್ವಯಿಸುವುದಿಲ್ಲವೇ?

11/07/2021, 18:58

ಕಾರ್ಕಳ(reporterkarnataka news): ಒಂದು ಕಡೆ ಕೊರೊನಾ ಎರಡನೇ ಅಲೆಯ ಅರ್ಭಟ ಇನ್ನೂ ತಗ್ಗಿಲ್ಲ. ಇನ್ನೊಂದು ಕಡೆ ಮೂರನೇ ಅಲೆಯ ಭೀತಿ ಶುರುವಾಗಿದೆ. ಇವೆಲ್ಲದರ ನಡುವೆ ರಾಜಕೀಯ ಮೇಲಾಟ ಶುರುವಾಗಿದೆ. ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಎರಡೂ ಕೂಡ ಅಲ್ಲಲ್ಲಿ ಸಭೆ- ಸಮಾರಂಭ ಆಯೋಜಿಸುತ್ತಿವೆ. ಜನರು ಕೂಡ ಯಾವುದೇ ಭಯವಿಲ್ಲದೆ ಹುಚ್ಚೆದ್ದು ಸೇರುತ್ತಿದ್ದಾರೆ. ಇದಕ್ಕೊಂದು ಸಾಕ್ಷಿ ಕಾರ್ಕಳದ ಬಲ್ಲಿರಿ ಗ್ರಾಮದಲ್ಲಿ ನಡೆದ ಸಮಾರಂಭ.

ಮೊನ್ನೆ ಮೊನ್ನೆ ಮಂಗಳೂರು, ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ – ಸಂವಾದ ನಡೆಯಿತು. ಇಂದು ಮಂಗಳೂರು ರೈಲು ನಿಲ್ದಾಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮುಂದಾಳತ್ವದಲ್ಲಿ ಗಾಜಿನ ಛಾವಣಿಯ ರೈಲಿಗೆ ಹಸಿರು ನಿಶಾನೆ ತೋರಿಸುವ ಕಾರ್ಯಕ್ರಮ ನಡೆಯಿತು. ಎಲ್ಲೂ ಸಾಮಾಜಿಕ ಅಂತರವಿರಲಿಲ್ಲ.


ಇದರ ಜತೆಗೆ ಕಾರ್ಕಳದ ನಲ್ಲೂರು ಗ್ರಾಮದಲ್ಲಿ ಅರಣ್ಯ ಸಚಿವ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಭಾರಿ ಗೌಜಿ ಗಮತ್ತಿನ ಮೆರವಣಿಗೆ ನಡೆಯಿತು. ಪದ್ಮಶ್ರೀ ಸಾಲುಮರ ತಿಕ್ಕಮ್ಮ ವೃಕ್ಚ್ಯೋದ್ಯಾನಕ್ಕೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮ ಇದಾಗಿತ್ತು. ಕೇರಳ ಶೈಲಿಯ ಚೆಂಡೆ, ಗೊಂಬೆ ಕುಣಿತದೊಂದಿಗೆ ಶಿಲಾನ್ಯಾಸ ನಡೆಯುವ ಸ್ಥಳಕ್ಕೆ ಸಚಿವ ಲಿಂಬಾವಳಿ ಅವರನ್ನು ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು. ಕಾರ್ಕಳ ಶಾಸಕ ಸುನಿಲ್ ಕುಮಾರ್ ಮುಂತಾದ ಗಣ್ಯರು ಕೂಡ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಹೆಚ್ಚಿನವರ ಬಾಯಿಯಲ್ಲಿ ಮಾಸ್ಕ್ ಇರುವುದು ಬಿಟ್ಟರೆ ಸಾಮಾಜಿಕ ಅಂತರ ಎಲ್ಲೂ ಇರಲಿಲ್ಲ. ಸಚಿವರು, ಶಾಸಕರು, ಸಾರ್ವಜನಿಕರು ಹೆಗಲಿಗೆ ಹೆಗಲು ತಾಗಿಸಿಕೊಂಡಿಯೇ ಮೆರವಣಿಗೆಯಲ್ಲಿ ಸಾಗಿದರು. ರಾಜ್ಯ ಸರಕಾರದ ಗೈಡ್ಸ್ ಲೈನ್ ಪಾಲನೆ

ಸಚಿವ, ಶಾಸಕರಿಗೆ ಬೇಕಾಗಿಲ್ಲ. ಇವರಿಗೆ ಕೊರೊನಾದ ಭಯವಿಲ್ಲ. ಯಾಕೆಂದರೆ ಇವರದೆಲ್ಲ ಎರಡು ಡೋಸ್ ಲಸಿಕೆಯಾಗಿದೆ. ಇಮ್ಯುನಿಟಿ ಬೂಸ್ಟರ್ ಸೇವಿಸುತ್ತಾರೆ. ಅಗತ್ಯ ಬಿದ್ದರೆ ಆಕ್ಸಿಜನ್ ಸಿಲಿಂಡರ್ ಮನೆ ಬಾಗಿಲಿಗೆ ಬರುತ್ತದೆ.

ಆದರೆ ಬಡಪಾಯಿಗಳ ಗತಿ ಏನು? ನಾವೇ ಚಿಂತಿಸಿ, ಉತ್ತರ ಕಂಡುಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು