5:46 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಇದೇನು ಕೊರೊನಾ ಮೆರವಣಿಗೆಯೇ ?: ಸರಕಾರದ ಗೈಡ್ ಲೈನ್ಸ್ ಸಚಿವ ಲಿಂಬಾವಳಿ, ಶಾಸಕ ಸುನಿಲ್ ಗೆ ಅನ್ವಯಿಸುವುದಿಲ್ಲವೇ?

11/07/2021, 18:58

ಕಾರ್ಕಳ(reporterkarnataka news): ಒಂದು ಕಡೆ ಕೊರೊನಾ ಎರಡನೇ ಅಲೆಯ ಅರ್ಭಟ ಇನ್ನೂ ತಗ್ಗಿಲ್ಲ. ಇನ್ನೊಂದು ಕಡೆ ಮೂರನೇ ಅಲೆಯ ಭೀತಿ ಶುರುವಾಗಿದೆ. ಇವೆಲ್ಲದರ ನಡುವೆ ರಾಜಕೀಯ ಮೇಲಾಟ ಶುರುವಾಗಿದೆ. ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಎರಡೂ ಕೂಡ ಅಲ್ಲಲ್ಲಿ ಸಭೆ- ಸಮಾರಂಭ ಆಯೋಜಿಸುತ್ತಿವೆ. ಜನರು ಕೂಡ ಯಾವುದೇ ಭಯವಿಲ್ಲದೆ ಹುಚ್ಚೆದ್ದು ಸೇರುತ್ತಿದ್ದಾರೆ. ಇದಕ್ಕೊಂದು ಸಾಕ್ಷಿ ಕಾರ್ಕಳದ ಬಲ್ಲಿರಿ ಗ್ರಾಮದಲ್ಲಿ ನಡೆದ ಸಮಾರಂಭ.

ಮೊನ್ನೆ ಮೊನ್ನೆ ಮಂಗಳೂರು, ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ – ಸಂವಾದ ನಡೆಯಿತು. ಇಂದು ಮಂಗಳೂರು ರೈಲು ನಿಲ್ದಾಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮುಂದಾಳತ್ವದಲ್ಲಿ ಗಾಜಿನ ಛಾವಣಿಯ ರೈಲಿಗೆ ಹಸಿರು ನಿಶಾನೆ ತೋರಿಸುವ ಕಾರ್ಯಕ್ರಮ ನಡೆಯಿತು. ಎಲ್ಲೂ ಸಾಮಾಜಿಕ ಅಂತರವಿರಲಿಲ್ಲ.


ಇದರ ಜತೆಗೆ ಕಾರ್ಕಳದ ನಲ್ಲೂರು ಗ್ರಾಮದಲ್ಲಿ ಅರಣ್ಯ ಸಚಿವ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಭಾರಿ ಗೌಜಿ ಗಮತ್ತಿನ ಮೆರವಣಿಗೆ ನಡೆಯಿತು. ಪದ್ಮಶ್ರೀ ಸಾಲುಮರ ತಿಕ್ಕಮ್ಮ ವೃಕ್ಚ್ಯೋದ್ಯಾನಕ್ಕೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮ ಇದಾಗಿತ್ತು. ಕೇರಳ ಶೈಲಿಯ ಚೆಂಡೆ, ಗೊಂಬೆ ಕುಣಿತದೊಂದಿಗೆ ಶಿಲಾನ್ಯಾಸ ನಡೆಯುವ ಸ್ಥಳಕ್ಕೆ ಸಚಿವ ಲಿಂಬಾವಳಿ ಅವರನ್ನು ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು. ಕಾರ್ಕಳ ಶಾಸಕ ಸುನಿಲ್ ಕುಮಾರ್ ಮುಂತಾದ ಗಣ್ಯರು ಕೂಡ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಹೆಚ್ಚಿನವರ ಬಾಯಿಯಲ್ಲಿ ಮಾಸ್ಕ್ ಇರುವುದು ಬಿಟ್ಟರೆ ಸಾಮಾಜಿಕ ಅಂತರ ಎಲ್ಲೂ ಇರಲಿಲ್ಲ. ಸಚಿವರು, ಶಾಸಕರು, ಸಾರ್ವಜನಿಕರು ಹೆಗಲಿಗೆ ಹೆಗಲು ತಾಗಿಸಿಕೊಂಡಿಯೇ ಮೆರವಣಿಗೆಯಲ್ಲಿ ಸಾಗಿದರು. ರಾಜ್ಯ ಸರಕಾರದ ಗೈಡ್ಸ್ ಲೈನ್ ಪಾಲನೆ

ಸಚಿವ, ಶಾಸಕರಿಗೆ ಬೇಕಾಗಿಲ್ಲ. ಇವರಿಗೆ ಕೊರೊನಾದ ಭಯವಿಲ್ಲ. ಯಾಕೆಂದರೆ ಇವರದೆಲ್ಲ ಎರಡು ಡೋಸ್ ಲಸಿಕೆಯಾಗಿದೆ. ಇಮ್ಯುನಿಟಿ ಬೂಸ್ಟರ್ ಸೇವಿಸುತ್ತಾರೆ. ಅಗತ್ಯ ಬಿದ್ದರೆ ಆಕ್ಸಿಜನ್ ಸಿಲಿಂಡರ್ ಮನೆ ಬಾಗಿಲಿಗೆ ಬರುತ್ತದೆ.

ಆದರೆ ಬಡಪಾಯಿಗಳ ಗತಿ ಏನು? ನಾವೇ ಚಿಂತಿಸಿ, ಉತ್ತರ ಕಂಡುಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು