5:23 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಇದೇನು ಕೊರೊನಾ ಮೆರವಣಿಗೆಯೇ ?: ಸರಕಾರದ ಗೈಡ್ ಲೈನ್ಸ್ ಸಚಿವ ಲಿಂಬಾವಳಿ, ಶಾಸಕ ಸುನಿಲ್ ಗೆ ಅನ್ವಯಿಸುವುದಿಲ್ಲವೇ?

11/07/2021, 18:58

ಕಾರ್ಕಳ(reporterkarnataka news): ಒಂದು ಕಡೆ ಕೊರೊನಾ ಎರಡನೇ ಅಲೆಯ ಅರ್ಭಟ ಇನ್ನೂ ತಗ್ಗಿಲ್ಲ. ಇನ್ನೊಂದು ಕಡೆ ಮೂರನೇ ಅಲೆಯ ಭೀತಿ ಶುರುವಾಗಿದೆ. ಇವೆಲ್ಲದರ ನಡುವೆ ರಾಜಕೀಯ ಮೇಲಾಟ ಶುರುವಾಗಿದೆ. ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಎರಡೂ ಕೂಡ ಅಲ್ಲಲ್ಲಿ ಸಭೆ- ಸಮಾರಂಭ ಆಯೋಜಿಸುತ್ತಿವೆ. ಜನರು ಕೂಡ ಯಾವುದೇ ಭಯವಿಲ್ಲದೆ ಹುಚ್ಚೆದ್ದು ಸೇರುತ್ತಿದ್ದಾರೆ. ಇದಕ್ಕೊಂದು ಸಾಕ್ಷಿ ಕಾರ್ಕಳದ ಬಲ್ಲಿರಿ ಗ್ರಾಮದಲ್ಲಿ ನಡೆದ ಸಮಾರಂಭ.

ಮೊನ್ನೆ ಮೊನ್ನೆ ಮಂಗಳೂರು, ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ – ಸಂವಾದ ನಡೆಯಿತು. ಇಂದು ಮಂಗಳೂರು ರೈಲು ನಿಲ್ದಾಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮುಂದಾಳತ್ವದಲ್ಲಿ ಗಾಜಿನ ಛಾವಣಿಯ ರೈಲಿಗೆ ಹಸಿರು ನಿಶಾನೆ ತೋರಿಸುವ ಕಾರ್ಯಕ್ರಮ ನಡೆಯಿತು. ಎಲ್ಲೂ ಸಾಮಾಜಿಕ ಅಂತರವಿರಲಿಲ್ಲ.


ಇದರ ಜತೆಗೆ ಕಾರ್ಕಳದ ನಲ್ಲೂರು ಗ್ರಾಮದಲ್ಲಿ ಅರಣ್ಯ ಸಚಿವ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಭಾರಿ ಗೌಜಿ ಗಮತ್ತಿನ ಮೆರವಣಿಗೆ ನಡೆಯಿತು. ಪದ್ಮಶ್ರೀ ಸಾಲುಮರ ತಿಕ್ಕಮ್ಮ ವೃಕ್ಚ್ಯೋದ್ಯಾನಕ್ಕೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮ ಇದಾಗಿತ್ತು. ಕೇರಳ ಶೈಲಿಯ ಚೆಂಡೆ, ಗೊಂಬೆ ಕುಣಿತದೊಂದಿಗೆ ಶಿಲಾನ್ಯಾಸ ನಡೆಯುವ ಸ್ಥಳಕ್ಕೆ ಸಚಿವ ಲಿಂಬಾವಳಿ ಅವರನ್ನು ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು. ಕಾರ್ಕಳ ಶಾಸಕ ಸುನಿಲ್ ಕುಮಾರ್ ಮುಂತಾದ ಗಣ್ಯರು ಕೂಡ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಹೆಚ್ಚಿನವರ ಬಾಯಿಯಲ್ಲಿ ಮಾಸ್ಕ್ ಇರುವುದು ಬಿಟ್ಟರೆ ಸಾಮಾಜಿಕ ಅಂತರ ಎಲ್ಲೂ ಇರಲಿಲ್ಲ. ಸಚಿವರು, ಶಾಸಕರು, ಸಾರ್ವಜನಿಕರು ಹೆಗಲಿಗೆ ಹೆಗಲು ತಾಗಿಸಿಕೊಂಡಿಯೇ ಮೆರವಣಿಗೆಯಲ್ಲಿ ಸಾಗಿದರು. ರಾಜ್ಯ ಸರಕಾರದ ಗೈಡ್ಸ್ ಲೈನ್ ಪಾಲನೆ

ಸಚಿವ, ಶಾಸಕರಿಗೆ ಬೇಕಾಗಿಲ್ಲ. ಇವರಿಗೆ ಕೊರೊನಾದ ಭಯವಿಲ್ಲ. ಯಾಕೆಂದರೆ ಇವರದೆಲ್ಲ ಎರಡು ಡೋಸ್ ಲಸಿಕೆಯಾಗಿದೆ. ಇಮ್ಯುನಿಟಿ ಬೂಸ್ಟರ್ ಸೇವಿಸುತ್ತಾರೆ. ಅಗತ್ಯ ಬಿದ್ದರೆ ಆಕ್ಸಿಜನ್ ಸಿಲಿಂಡರ್ ಮನೆ ಬಾಗಿಲಿಗೆ ಬರುತ್ತದೆ.

ಆದರೆ ಬಡಪಾಯಿಗಳ ಗತಿ ಏನು? ನಾವೇ ಚಿಂತಿಸಿ, ಉತ್ತರ ಕಂಡುಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು