8:09 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಪೌರಕಾರ್ಮಿಕರ ಹಿತಾಸಕ್ತಿಗಳನ್ನು ಗಾಳಿಗೆ ತೂರಿದ ಪಾಲಿಕೆ: ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ನಾಗಣ್ಣ ಗೌಡ ಆಕ್ರೋಶ

09/03/2023, 11:41

ಮಂಗಳೂರು(reporterkarnataka.com): ಮಂಗಳೂರು ನಗರವನ್ನು ಸ್ವಚ್ಚ ಮಾಡುವ ಪೌರಕಾರ್ಮಿಕರ ಹಿತಾಸಕ್ತಿಗಳನ್ನು ಗಾಳಿಗೆ ತೂರಿರುವ ಪಾಲಿಕೆ ಕಾರ್ಮಿಕರನ್ನು ಮಧ್ಯಯುಗದ ಗುಲಾಮರಂತೆ ನಡೆಸಿಕೊಳ್ಳುತ್ತಿದೆ ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಕೂಳೂರಿನ ನಾರಾಯಣ ಗುರು ಸಭಾಂಗಣದಲ್ಲಿ ಹೊರಗುತ್ತಿಗೆ ನೌಕರರ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಪೌರಕಾರ್ಮಿಕರ ಕುರಿತ ಎಲ್ಲ ನಿಯಮಗಳನ್ನು ಪಾಲಿಕೆ ನಿರ್ಲಕ್ಷಿಸಿದೆ. ಬೆಳಗಿನ ಉಪಹಾರ, ಕನಿಷ್ಟ ವೇತನ, ಶೌಚಾಲಯ ಸೇರಿದಂತೆ ಕನಿಷ್ಟ ಅಗತ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ಪೌರಕಾರ್ಮಿಕರನ್ನು ಪ್ರಾಣಿಗಳಂತೆ ನಡೆಸಿಕೊಳ್ಳಲಾಗುತ್ತಿದೆ. ಹೊರಗುತ್ತಿಗೆ ನೌಕರರಿಗೆ ಯಾವುದೇ ಕೆಲಸದ ವೇಳೆಯೆ ನಿಗದಿಯಾಗಿಲ್ಲ. ಸಕಾಲಕ್ಕೆ ಸಂಬಳವೂ ಸಿಗುವುದಿಲ್ಲ ಎಂದು ಕಿಡಿಕಾರಿದರು.

ಸರಕಾರ ಕೂಡಲೆ ಎಲ್ಲ ಬಗೆಯ ಪೌರಕಾರ್ಮಿಕರನ್ನು ನೇರನೇಮಕಾತಿಗೊಳಿಸಬೇಕು ನಿಯಮಾನುಸಾರ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾಧಿಕಾರಿಗಳ ಆದೇಶವನ್ನೆ ಕಾಲಕಸ ಮಾಡಿಕೊಂಡಿರುವ ವಿಪರ್ಯಾಸ ಪಾಲಿಕೆಯಲ್ಲಿ ನಡೆದಿದೆ. ಜಿಲ್ಲಾಧಿಕಾರಿಗಳು ಈ ಸಂಬಂದ ಅಗತ್ಯಕ್ರಮ ವಹಿಸುವಂತೆ ಒತ್ತಾಯಿಸಿದರು.
ವೇದಿಕೆಯಲ್ಲಿ ಮಂಗಳೂರು ಸಫಾಯಿ ಕರ್ಮಚಾರಿ ಸಂಘದ ಜಿಲ್ಲಾಧ್ಯಕ್ಷರಾದ ನಾರಯಣ ಶೆಟ್ಟಿ ಕರಾವಳಿ ವಿಭಾಗದ ಸಂಚಾಲಕ ಅಣ್ಣಪ್ಪ ಕಾರೇಕಾಡು ಕೋಶಾಧಿಕಾರಿ ಕೃಷ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ, ವಿಭಾಗಾಧ್ಯಕ್ಷ ಚನ್ನಕೇಶವ ಹೊರಗುತ್ತಿಗೆ ಸಂಘದ ಸಿದ್ದರೂಡಾ, ಕರುನಾಡ ಸೇವಕರು ಸಂಘದ ಚಂದ್ರು ಎಂ.ಎನ್ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು