10:23 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಉಪ್ಪಿನಂಗಡಿ: ಬಾಲಕಿಯ ಅತ್ಯಾಚಾರ ಯತ್ನ; ಇಬ್ಬರು ಆರೋಪಿಗಳ ಬಂಧನ, ಪೋಕ್ಸೋ ದಾಖಲು

13/03/2023, 17:48

ಪುತ್ತೂರು(reporterkarnataka.com): ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಮರ ತುಂಡರಿಸುವ ಕೆಲಸ ಮೇಲೆ ಆರೋಪಿಗಳಿಬ್ಬರು ಕಳೆದ ಮೂರು ದಿನಗಳಿಂದ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ಹೋಗಿ ಮನೆಯಲ್ಲಿನ ಸದಸ್ಯರ ಬಗ್ಗೆ ಗಮನಿಸಿದ ಆರೋಪಿಗಳ ಪೈಕಿ ಹಸೈನಾರ್ ಶುಕ್ರವಾರ ಸಂಜೆ ಸಂತ್ರಸ್ತೆಯ ಮನೆಗೆ ಬಂದು ಮರ ತುಂಡರಿಸುವ ಚೈನ್ ಇಲ್ಲಿ ಬಾಕಿಯಾಗಿದೆ ಎಂದು ಹೇಳಿ ಬಾಲಕಿಯ ಕೈಗೆ ಚೀಟಿಯೊಂದನ್ನು ನೀಡಿ, ಈ ನಂಬ್ರರಿಗೆ ಫೋನ್ ಮಾಡು, ಇಲ್ಲದಿದ್ದರೆ ನಿನ್ನನ್ನು ಬಿಡುವುದಿಲ್ಲ ಎಂಬುವುದಾಗಿ ಜೀವ ಬೆದರಿಕೆಯೊಡ್ಡಿ ಹೋಗಿದ್ದ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.
ಇನ್ನು ಮರು ದಿನ ರಾತ್ರಿ 8 ಗಂಟೆಯ ಸುಮಾರಿಗೆ ಹಸೈನಾರ್ ತನ್ನ ಸಹಚರ ಅಬ್ಬಾಸ್ ಎಂಬಾತನೊಂದಿಗೆ ಮನೆಯ ಒಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಬಾಲಕಿಯನ್ನು ಅತ್ಯಾಚಾರಕ್ಕೆ ಯತ್ನಿಸಿದರು. ಆಗ ಬಾಲಕಿ ಹಾಗೂ ಆಕೆಯ ತಾಯಿ ರಕ್ಷಣೆಗಾಗಿ ಬೊಬ್ಬೆ ಹೊಡೆದಾಗ ನೆರೆ ಮನೆಯವರು ಓಡಿ ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ಬಳಿಕ ಸ್ಥಳೀಯರ ಸಹಕಾರದಿಂದ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು