11:58 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಸುರತ್ಕಲ್ ಗೋವಿಂದ ದಾಸ ಪಿಯು ಕಾಲೇಜಿನಲ್ಲಿ ಬೃಹತ್ ಲಸಿಕಾ ಶಿಬಿರ

12/07/2021, 08:39

ಸುರತ್ಕಲ್ (reporterkarnataka news): ಇಲ್ಲಿನ ಗೋವಿಂದ ದಾಸ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಕುಳಾಯಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಬೃಹತ್ ಲಸಿಕಾ ಶಿಬಿರ ಕಾಲೇಜಿನಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಹಿಂದೂ ವಿದ್ಯಾದಾಯಿನೀ ಸಂಘದ ಉಪಾಧ್ಯಕ್ಷ ಪ್ರೊ.ವೈ.ವಿ.ರತ್ನಾಕರ ರಾವ್, ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರ ಪ್ರೊ.ಕೃಷ್ಣಮೂರ್ತಿ ಪಿ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶಪಾಲರಾದ ಲಕ್ಷ್ಮೀ ಪಿ. ಶುಭ ಹಾರೈಸಿದರು.

ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಭಂಡಾರಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಿಶ್ಚಿತ ಹಾಗೂ ಕೇಂದ್ರದ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಆಯೋಜಕರಾದ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಪೈಕ ವೆಂಕಟರಮಣ ರಾವ್, ಉಪನ್ಯಾಸಕರಾದ ಡಾ.ಚೇತನಾ ಬಿ.ಕೆ., ಜಯಂತಿ ಅಮೀನ್, ಸಹಯೋಜನಾಧಿಕಾರಿಗಳಾದ ಕೃತಿ, ರಾಕೇಶ್ ಹೊಸಬೆಟ್ಟು ಉಪಸ್ಥಿತರಿದ್ದರು.

ಉಪನ್ಯಾಸಕಿ ಪಲ್ಲವಿ ರಾಜೇಶ್ ಗಣ್ಯರನ್ನು ಸ್ವಾಗತಿಸಿದರು. ಶಿಬಿರದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡು ಒಟ್ಟು 380 ಅಭ್ಯರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು