9:43 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸುರತ್ಕಲ್ ಗೋವಿಂದ ದಾಸ ಪಿಯು ಕಾಲೇಜಿನಲ್ಲಿ ಬೃಹತ್ ಲಸಿಕಾ ಶಿಬಿರ

12/07/2021, 08:39

ಸುರತ್ಕಲ್ (reporterkarnataka news): ಇಲ್ಲಿನ ಗೋವಿಂದ ದಾಸ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಕುಳಾಯಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಬೃಹತ್ ಲಸಿಕಾ ಶಿಬಿರ ಕಾಲೇಜಿನಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಹಿಂದೂ ವಿದ್ಯಾದಾಯಿನೀ ಸಂಘದ ಉಪಾಧ್ಯಕ್ಷ ಪ್ರೊ.ವೈ.ವಿ.ರತ್ನಾಕರ ರಾವ್, ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರ ಪ್ರೊ.ಕೃಷ್ಣಮೂರ್ತಿ ಪಿ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶಪಾಲರಾದ ಲಕ್ಷ್ಮೀ ಪಿ. ಶುಭ ಹಾರೈಸಿದರು.

ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಭಂಡಾರಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಿಶ್ಚಿತ ಹಾಗೂ ಕೇಂದ್ರದ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಆಯೋಜಕರಾದ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಪೈಕ ವೆಂಕಟರಮಣ ರಾವ್, ಉಪನ್ಯಾಸಕರಾದ ಡಾ.ಚೇತನಾ ಬಿ.ಕೆ., ಜಯಂತಿ ಅಮೀನ್, ಸಹಯೋಜನಾಧಿಕಾರಿಗಳಾದ ಕೃತಿ, ರಾಕೇಶ್ ಹೊಸಬೆಟ್ಟು ಉಪಸ್ಥಿತರಿದ್ದರು.

ಉಪನ್ಯಾಸಕಿ ಪಲ್ಲವಿ ರಾಜೇಶ್ ಗಣ್ಯರನ್ನು ಸ್ವಾಗತಿಸಿದರು. ಶಿಬಿರದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡು ಒಟ್ಟು 380 ಅಭ್ಯರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು