5:44 AM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಮಾ.21ರಂದು ಸಾರಿಗೆ ನೌಕರರ ಮುಷ್ಕರ; 23 ಸಾವಿರ ಕೆಎಸ್ಸಾರ್ಟಿಸಿ ಬಸ್ ರಸ್ತೆಗೆ ಇಳಿಯೊಲ್ಲ; ಅನಂತ ಸುಬ್ಬರಾವ್

17/03/2023, 14:11

ಬೆಂಗಳೂರು(reporterkarnataka.com): ವೇತನ ಪರಿಷ್ಕರಣೆ ಸೇರಿದಂತೆ ಸಾರಿಗೆ ನೌಕರರ ಎಲ್ಲ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾ. 21ರಂದು ಕರೆ ನೀಡಿರುವ ಸಾರಿಗೆ ಮುಷ್ಕರದಿಂದ ಹಿಂದೇ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ನೌಕರರ ಸಂಘದ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಹೇಳಿದ್ದಾರೆ.
ಮಾ.21ಕ್ಕೆ ಮುಷ್ಕರ ಆರಂಭಗೊಳ್ಳುತ್ತದೆ. ಮುಖ್ಯಮಂತ್ರಿ ಅವರು ನೇರವಾಗಿ ನಮ್ಮ ಜೊತೆ ಸಭೆ ಮಾಡದೇ ಮೂಲವೇತನ ಶೇ.15ರಚ್ಡು ಹೆಚ್ಚಳ ಘೋಷಣೆ ಮಾಡಿದ್ದಾರೆ. ಸಿಎಂ ನಮ್ಮೊಂದಿಗೆ ಚರ್ಚೆಗೆ ಬರಬೇಕು. ಕೇವಲ ಒಂದು ಬೇಡಿಕೆ ಈಡೇರಿಸುವ ಆದೇಶ ಬಂದರೆ ನಮ್ಮ ಹೋರಾಟ ನಿಲ್ಲದು. ಈ ಹೋರಾಟಕ್ಕೆ ನಾಲ್ಕು ನಿಗಮಗಳ ನೌಕರರು ಬೆಂಬಲ ವ್ಯಕ್ತಪಡಿಸಿದ್ದು, ಮಾ.21ರಿಂದ 23 ಸಾವಿರ ಕೆಎಸ್ಸಾರ್ಟಿಸಿ ಬಸ್‍ಗಳು ರಸ್ತೆಗೆ ಇಳಿಯಲ್ಲ ಎಂದರು.
ಸರಕಾರ ಏಕಪಕ್ಷೀಯವಾಗಿ ಮೂಲ ವೇತನದ ಶೇ15ರಷ್ಟು ಹೆಚ್ಚಳವನ್ನು ಘೋಷಿಸಿರುವುದು ಮಾಧ್ಯಮಗಳಿಂದ ತಿಳಿದು ಬಂದಿದೆ. ಅಧಿಕೃತ ಆದೇಶವೇ ಬಂದಿಲ್ಲ. ಇನ್ನೂ ನೌಕರರ ಭತ್ಯೆ, ವಜಾಗೊಂಡವರ ಮರು ನೇಮಕ ಸೇರಿದಂತೆ ಹಲವು ಬೇಡಿಕೆಗಳು ಹಾಗೆಯೆ ಉಳಿದಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಬೇಡಿಕೆಗಳು ಈಡೇರಿಸುವವರೆಗೆ ಸಾರಿಗೆ ನೌಕರರ ಸಂಘವು ಮಾ 21 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿದೆ. ಜನರಿಗೆ ತೊಂದರೆ ಮಾಡುವ ಉದ್ದೇಶವಿಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು