10:30 PM Saturday7 - March 2026
ಬ್ರೇಕಿಂಗ್ ನ್ಯೂಸ್
ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಕಾನ- ಬಾಳ ರಸ್ತೆ ಕಾಮಗಾರಿ ವಿಳಂಬ ವಿರೋಧಿಸಿ ಡಿವೈಎಫ್ಐ ರಸ್ತೆತಡೆ, ಪ್ರತಿಭಟನೆ

17/03/2023, 22:05

ಸುರತ್ಕಲ್(reporterkarnataka.com): ನೆನೆಗುದಿಗೆ ಬಿದ್ದಿರುವ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಒತ್ತಾಯಿಸಿ ಶುಕ್ರವಾರ ಕಾನ ಜಂಕ್ಷನ್ ಬಳಿ ಡಿವೈಎಫ್ಐ ಮತ್ತು ಆಟೋರಿಕ್ಷಾ ಚಾಲಕರ ಸಂಘ ಜಂಟಿಯಾಗಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿತು.

ಜನರ ಹೋರಾಟದಿಂದ ಮೇಲ್ದರ್ಜೆಗೇರಿದ್ದ ಸುರತ್ಕಲ್-ಕಾನ-ಬಾಳ ರಸ್ತೆಯ ಅಭಿವೃದ್ಧಿ ಕಾರ್ಯವು ಕಾನ ಜಂಕ್ಷನ್ ವರೆಗೆ ಮಾತ್ರ ಕಾಂಕ್ರಿಟಿಕರಣ ಆಗಿದ್ದು ಕಾನ ದಿಂದ ಬಾಳ, ಎಂಆರ್ ಪಿಎಲ್ ಮುಖ್ಯ ದ್ವಾರದ ವರೆಗಿನ 1.75 ಕಿಮೀ ರಸ್ತೆ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರ ಸುಗಮ ಸಂಚಾರಕ್ಕೆ, ರಸ್ತೆಯ ಅಪೂರ್ಣ ಕಾಮಗಾರಿಯಿಂದ ಪರಿಸರದಲ್ಲಿ ಧೂಳು ಹರಡಿ ಜನರ ಆರೋಗ್ಯಕ್ಕೆ ತೊಂದರೆ ಆಗುತ್ತಿದೆ. ಅಂಗನವಾಡಿಯ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗಿ ಅಂಗನವಾಡಿ ಕೇಂದ್ರ ಮುಚ್ಚುವ ಸ್ಥಿತಿಗೆ ತಲುಪಿದೆ. ಕಾಮಗಾರಿಯ ಗುತ್ತಿಗೆ ವಹಿಸಿಕೊಂಡ ಗುತ್ತಿಗೆದಾರನ ಮೇಲೆ ಕ್ರಮ ಕೈಗೊಂಡು ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು ಒಂದು ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಎಚ್ಚರಿಸಿದರು.

ಡಿವೈಎಫ್ಐ ನಗರ ಉಪಾಧ್ಯಕ್ಷ ಶ್ರೀನಾಥ್ ಕುಲಾಲ್, ಆಟೋ ರಿಕ್ಷಾ ಚಾಲಕರ ಸಂಘದ ಮುಖಂಡ ಗಣೇಶ್ ಪ್ರೇಮ್ ನಗರ ಪ್ರತಿಭಟನೆಯಲ್ಲಿ ಮಾತನಾಡಿದರು.
ಡಿವೈಎಫ್ಐ ಮುಖಂಡರಾದ ಸಾದಿಕ್ ಕಿಲ್ಪಾಡಿ,ಮುಸ್ತಫಾ ಅಂಗರಗುಂಡಿ, ನವಾಜ್ ಕುಳಾಯಿ, ಮಕ್ಸೂದ್ ಬಿಕೆ, ಐ ಮೊಹಮ್ಮದ್, ರಫೀಕ್ ಸ್ಟಾರ್, ಹುಸೈನ್ ಬಾಳ, ಸೈಫರ್ ಆಲಿ ಚೊಕ್ಕಬೆಟ್ಟು, ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಮೊಹಮ್ಮದ್ ಶರೀಫ್ ಕಾನ, ಸಾಮಾಜಿಕ ಮುಂದಾಳುಗಳಾದ ಜಗದೀಶ್ ಕಾನ, ಫ್ರಾನ್ಸಿಸ್, ಮೆಹಬೂಬ್ ಖಾನ್, ಆಟೋ ರಿಕ್ಷಾ ಚಾಲಕರ ಸಂಘದ ಹಂಝ ಮೈಂದಗುರಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು