7:18 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಉಡುಪಿ: ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಅವರ ‘ನಮ್ಮ ಉಡುಪಿ’ ಕೃತಿ ನಾಳೆ ಬಿಡುಗಡೆ

18/03/2023, 11:46

ಮಂಗಳೂರು(reporterkarnataka.com) : ವಿಜಯ ಕರ್ನಾಟಕ ಸ್ಥಾನೀಯ ಸಂಪಾದಕ ಹಾಗೂ ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಅವರ ‘ನಮ್ಮ ಉಡುಪಿ’ ಕೃತಿ ಮಾರ್ಚ್ 19ರಂದು ಬಿಡುಗಡೆಗೊಳ್ಳಲಿದೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಾರಂಭದಲ್ಲಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ
ಜಸ್ಟಿಸ್ ಸಂತೋಷ್ ಹೆಗ್ಡೆ ಅವರು ಉಡುಪಿ ಎಂಜಿಎಂ ಕಾಲೇಜಿನ ಆವರಣದಲ್ಲಿ ಕೃತಿ ಬಿಡುಗಡೆಗೊಳಿಸಲಿದ್ದಾರೆ. ಕೃತಿಯಲ್ಲಿ ಉಡುಪಿ ಜಿಲ್ಲೆಯ ಭೌಗೋಳಿಕ ವಿವರಗಳು,ಭಾಷೆ, ಧಾರ್ಮಿಕ ಆಚರಣೆ, ಬ್ಯಾಂಕಿಂಗ್, ಉಡುಪಿ ಲೋಕಸಭೆ, ವಿಧಾನ ಸಭೆ ಸದಸ್ಯರ ವಿವರಗಳು, ಸ್ಥಳೀಯಾಡಳಿತ ಸಂಸ್ಥೆಗಳ ಮಾಹಿತಿ,ಪ್ರವಾಸೋದ್ಯಮ, ಪ್ರಮುಖ ತಾಣಗಳ ಚಿತ್ರಣ, ಪ್ರಾಥಮಿಕ, ಪ್ರೌಢ, ಕಾಲೇಜು, ವೃತ್ತಿಪರ ಕಾಲೇಜುಗಳು, ಪೊಲೀಸ್ ಠಾಣೆ, ಮಾಧ್ಯಮ ಸಂಸ್ಥೆಗಳು, ತುಳು ಸಿನಿಮಾಗಳ ಮಾಹಿತಿ, ರಾಜಕೀಯ ವಿವರಗಳು, ಆಡಳಿತ ಮಾಹಿತಿ, ಪ್ರವಾಸೋದ್ಯಮ, ಶಿಕ್ಷಣ ಸಂಸ್ಥೆಗಳು, ವೃತ್ತಿಪರ ಕಾಲೇಜುಗಳು, ಗ್ರಂಥಾಲಯಗಳು, ಪ್ರಮುಖ ದೇವಸ್ಥಾನ, ಚರ್ಚ್, ಮಸೀದಿಗಳು, ಹೊಟೇಲ್, ಲಾಡ್ಜ್ ಗಳು, ರೆಸಾರ್ಟ ಗಳು, ಕಲ್ಯಾಣ ಮಂಟಪಗಳು, ಪ್ರಮುಖ ಕೆರೆ, ಮದಗಗಳು, ಸಾರಿಗೆ ಸೌಲಭ್ಯ,ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳು, ಬ್ಲಾಡ್ ಬ್ಯಾಂಕ್‌ಗಳು ಹೀಗೆ ಸಮಗ್ರ ಮಾಹಿತಿಗಳನ್ನು ಈ ಕೃತಿ ಒಳಗೊಂಡಿದೆ. ಕೃತಿಗೆ ಮಂಗಳೂರು ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ಮುನ್ನುಡಿ ಬರೆದಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಬೆನ್ನುಡಿ ಬರೆದಿದ್ದಾರೆ. ಕೃತಿಗೆ ಡಿಜಿಟಲ್ ಸ್ಪರ್ಶ ಕೂಡ ನೀಡಲಾಗಿದ್ದು, ಉಡುಪಿ ಜಿಲ್ಲೆಯ ಸಮಗ್ರ ಚಿತ್ರಣದ ದ್ರಶ್ಯವನ್ನು ಕೂಡ ಪುಸ್ತಕದಲ್ಲಿರುವ ಕ್ಯೂ ಆರ್ ಕೋಡ್ ಬಳಸಿಕೊಂಡು ವೀಕ್ಷಿಸಬಹುದಾಗಿದೆ.
ಆಕೃತಿ ಆಶಯ ಪಬ್ಲಿಕೇಶನ್‌ ಕೃತಿ ಪ್ರಕಟಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು