8:22 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರಿಂದ ಏಟು ತಿಂದಿದ್ದು ಕಾಂಗ್ರೆಸ್ ಅಭಿಮಾನಿಯಲ್ಲ, ಜನತಾ ದಳದ ಕಾರ್ಯಕರ್ತ !!: ಏನು ವಿಚಿತ್ರ ನೋಡಿ! 

12/07/2021, 11:05

ಮಂಡ್ಯ(reporterkarnataka news): ಅವರ ಹೆಸರು ಉಮೇಶ್ ಮದ್ದೂರು. ಜೆಡಿಎಸ್ ಕಾರ್ಯಕರ್ತರು. ತೊರೆಬೊಮ್ಮನ ಹಳ್ಳಿ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರೂ ಹೌದು.

ಉಮೇಶ್ ಬಗ್ಗೆ ಯಾಕಿಷ್ಟು ವಿವರ ಅಂತ ಅಂದುಕೊಂಡ್ರಾ…? ಕಾರಣ ಇದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೈಯಿಂದ ಏಟು ತಿಂದವರು ಇದೇ ಉಮೇಶ್ ಮದ್ದೂರು.

ಹಾಗಾದರೆ ಜೆಡಿಎಸ್ ಕಾರ್ಯಕರ್ತರಾದ ಉಮೇಶ್ ಅವರು ಕಾಂಗ್ರೆಸ್ ಅಧ್ಯಕ್ಷರ ಜತೆ ಆ ಸಣ್ಣ ಮೆರವಣಿಗೆಯಲ್ಲಿ ಯಾಕೆ ಸೇರ್ಕೊಂಡರು? ಯಾಕೆ ಹೊಡೆಸಿಕೊಂಡ್ರು? ಎನ್ನುವ ಕುತೂಹಲ ನಿಮಗಿದೆಯೇ? ಹಾಗಾದರೆ ಉಮೇಶ್ ಮದ್ದೂರು ಅವರ ಬಾಯಿಯಲ್ಲೇ ಏನಾಯಿತು ಅನ್ನುವುದನ್ನು

ಕೇಳೋಣ ಬನ್ನಿ….

ನಾನು ನಮ್ಮ ಒಕ್ಕಲಿಗರ ನಾಯಕ ಬರುತ್ತಿದ್ದಾರೆ ಎಂಬ ಅಭಿಮಾನದಿಂದ ಹೋಗಿದ್ದೆ. ಫೋಟೋ ತೆಗೆದುಕೊಳ್ಳಬೇಕೆಂದು ಹತ್ತಿರ ಹೋದೆ. ಹೆಗಲ ಮೇಲೆ ಕೈಹಾಕುವಷ್ಟು ಸಣ್ಣತನ ನನ್ನಲ್ಲಿ ಇರಲಿಲ್ಲ. ನಾನೊಬ್ಬ ಪ್ರಜ್ಞಾವಂತ ವ್ಯಕ್ತಿ ಎನ್ನುತ್ತಾರೆ ಉಮೇಶ್ ಮದ್ದೂರು.

ಸಾಕಷ್ಟು ನೊಂದುಕೊಂಡಿರುವ ಉಮೇಶ್ ಮತ್ತೆ ಮಾತು ಮುಂದುವರಿಸುತ್ತಾರೆ. ಶಿವಕುಮಾರ್ ಅವರು ನನಗೆ ಸಂಬಂಧಿಕರೂ ಆಗಬೇಕು. ಬೇರೆ ಯಾರಾದರೂ ನನ್ನ ಮೇಲೆ ಕೈ ಮಾಡುತ್ತಿದ್ದರೆ ನಾನು ಅಲ್ಲೇ ಪ್ರತಿಭಟನೆ ಮಾಡುತ್ತಿದ್ದೆ. ಅವರ ಸ್ಥಾನಮಾನಕ್ಕೆ ಗೌರವ ಕೊಟ್ಟು ಸುಮ್ಮನಾಗಿದ್ದೇನೆ. ಶಿವಕುಮಾರ್ ಅವರು ಇನ್ನಾದರೂ ಇಂತಹ ವರ್ತನೆ ಬಿಡಬೇಕು ಎಂದು ಬುದ್ದಿವಾದದ ಮಾತನ್ನು ಬಹಳ ನಯವಾಗಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು