7:11 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರಿಂದ ಏಟು ತಿಂದಿದ್ದು ಕಾಂಗ್ರೆಸ್ ಅಭಿಮಾನಿಯಲ್ಲ, ಜನತಾ ದಳದ ಕಾರ್ಯಕರ್ತ !!: ಏನು ವಿಚಿತ್ರ ನೋಡಿ! 

12/07/2021, 11:05

ಮಂಡ್ಯ(reporterkarnataka news): ಅವರ ಹೆಸರು ಉಮೇಶ್ ಮದ್ದೂರು. ಜೆಡಿಎಸ್ ಕಾರ್ಯಕರ್ತರು. ತೊರೆಬೊಮ್ಮನ ಹಳ್ಳಿ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರೂ ಹೌದು.

ಉಮೇಶ್ ಬಗ್ಗೆ ಯಾಕಿಷ್ಟು ವಿವರ ಅಂತ ಅಂದುಕೊಂಡ್ರಾ…? ಕಾರಣ ಇದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೈಯಿಂದ ಏಟು ತಿಂದವರು ಇದೇ ಉಮೇಶ್ ಮದ್ದೂರು.

ಹಾಗಾದರೆ ಜೆಡಿಎಸ್ ಕಾರ್ಯಕರ್ತರಾದ ಉಮೇಶ್ ಅವರು ಕಾಂಗ್ರೆಸ್ ಅಧ್ಯಕ್ಷರ ಜತೆ ಆ ಸಣ್ಣ ಮೆರವಣಿಗೆಯಲ್ಲಿ ಯಾಕೆ ಸೇರ್ಕೊಂಡರು? ಯಾಕೆ ಹೊಡೆಸಿಕೊಂಡ್ರು? ಎನ್ನುವ ಕುತೂಹಲ ನಿಮಗಿದೆಯೇ? ಹಾಗಾದರೆ ಉಮೇಶ್ ಮದ್ದೂರು ಅವರ ಬಾಯಿಯಲ್ಲೇ ಏನಾಯಿತು ಅನ್ನುವುದನ್ನು

ಕೇಳೋಣ ಬನ್ನಿ….

ನಾನು ನಮ್ಮ ಒಕ್ಕಲಿಗರ ನಾಯಕ ಬರುತ್ತಿದ್ದಾರೆ ಎಂಬ ಅಭಿಮಾನದಿಂದ ಹೋಗಿದ್ದೆ. ಫೋಟೋ ತೆಗೆದುಕೊಳ್ಳಬೇಕೆಂದು ಹತ್ತಿರ ಹೋದೆ. ಹೆಗಲ ಮೇಲೆ ಕೈಹಾಕುವಷ್ಟು ಸಣ್ಣತನ ನನ್ನಲ್ಲಿ ಇರಲಿಲ್ಲ. ನಾನೊಬ್ಬ ಪ್ರಜ್ಞಾವಂತ ವ್ಯಕ್ತಿ ಎನ್ನುತ್ತಾರೆ ಉಮೇಶ್ ಮದ್ದೂರು.

ಸಾಕಷ್ಟು ನೊಂದುಕೊಂಡಿರುವ ಉಮೇಶ್ ಮತ್ತೆ ಮಾತು ಮುಂದುವರಿಸುತ್ತಾರೆ. ಶಿವಕುಮಾರ್ ಅವರು ನನಗೆ ಸಂಬಂಧಿಕರೂ ಆಗಬೇಕು. ಬೇರೆ ಯಾರಾದರೂ ನನ್ನ ಮೇಲೆ ಕೈ ಮಾಡುತ್ತಿದ್ದರೆ ನಾನು ಅಲ್ಲೇ ಪ್ರತಿಭಟನೆ ಮಾಡುತ್ತಿದ್ದೆ. ಅವರ ಸ್ಥಾನಮಾನಕ್ಕೆ ಗೌರವ ಕೊಟ್ಟು ಸುಮ್ಮನಾಗಿದ್ದೇನೆ. ಶಿವಕುಮಾರ್ ಅವರು ಇನ್ನಾದರೂ ಇಂತಹ ವರ್ತನೆ ಬಿಡಬೇಕು ಎಂದು ಬುದ್ದಿವಾದದ ಮಾತನ್ನು ಬಹಳ ನಯವಾಗಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು