2:42 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರಿಂದ ಏಟು ತಿಂದಿದ್ದು ಕಾಂಗ್ರೆಸ್ ಅಭಿಮಾನಿಯಲ್ಲ, ಜನತಾ ದಳದ ಕಾರ್ಯಕರ್ತ !!: ಏನು ವಿಚಿತ್ರ ನೋಡಿ! 

12/07/2021, 11:05

ಮಂಡ್ಯ(reporterkarnataka news): ಅವರ ಹೆಸರು ಉಮೇಶ್ ಮದ್ದೂರು. ಜೆಡಿಎಸ್ ಕಾರ್ಯಕರ್ತರು. ತೊರೆಬೊಮ್ಮನ ಹಳ್ಳಿ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರೂ ಹೌದು.

ಉಮೇಶ್ ಬಗ್ಗೆ ಯಾಕಿಷ್ಟು ವಿವರ ಅಂತ ಅಂದುಕೊಂಡ್ರಾ…? ಕಾರಣ ಇದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೈಯಿಂದ ಏಟು ತಿಂದವರು ಇದೇ ಉಮೇಶ್ ಮದ್ದೂರು.

ಹಾಗಾದರೆ ಜೆಡಿಎಸ್ ಕಾರ್ಯಕರ್ತರಾದ ಉಮೇಶ್ ಅವರು ಕಾಂಗ್ರೆಸ್ ಅಧ್ಯಕ್ಷರ ಜತೆ ಆ ಸಣ್ಣ ಮೆರವಣಿಗೆಯಲ್ಲಿ ಯಾಕೆ ಸೇರ್ಕೊಂಡರು? ಯಾಕೆ ಹೊಡೆಸಿಕೊಂಡ್ರು? ಎನ್ನುವ ಕುತೂಹಲ ನಿಮಗಿದೆಯೇ? ಹಾಗಾದರೆ ಉಮೇಶ್ ಮದ್ದೂರು ಅವರ ಬಾಯಿಯಲ್ಲೇ ಏನಾಯಿತು ಅನ್ನುವುದನ್ನು

ಕೇಳೋಣ ಬನ್ನಿ….

ನಾನು ನಮ್ಮ ಒಕ್ಕಲಿಗರ ನಾಯಕ ಬರುತ್ತಿದ್ದಾರೆ ಎಂಬ ಅಭಿಮಾನದಿಂದ ಹೋಗಿದ್ದೆ. ಫೋಟೋ ತೆಗೆದುಕೊಳ್ಳಬೇಕೆಂದು ಹತ್ತಿರ ಹೋದೆ. ಹೆಗಲ ಮೇಲೆ ಕೈಹಾಕುವಷ್ಟು ಸಣ್ಣತನ ನನ್ನಲ್ಲಿ ಇರಲಿಲ್ಲ. ನಾನೊಬ್ಬ ಪ್ರಜ್ಞಾವಂತ ವ್ಯಕ್ತಿ ಎನ್ನುತ್ತಾರೆ ಉಮೇಶ್ ಮದ್ದೂರು.

ಸಾಕಷ್ಟು ನೊಂದುಕೊಂಡಿರುವ ಉಮೇಶ್ ಮತ್ತೆ ಮಾತು ಮುಂದುವರಿಸುತ್ತಾರೆ. ಶಿವಕುಮಾರ್ ಅವರು ನನಗೆ ಸಂಬಂಧಿಕರೂ ಆಗಬೇಕು. ಬೇರೆ ಯಾರಾದರೂ ನನ್ನ ಮೇಲೆ ಕೈ ಮಾಡುತ್ತಿದ್ದರೆ ನಾನು ಅಲ್ಲೇ ಪ್ರತಿಭಟನೆ ಮಾಡುತ್ತಿದ್ದೆ. ಅವರ ಸ್ಥಾನಮಾನಕ್ಕೆ ಗೌರವ ಕೊಟ್ಟು ಸುಮ್ಮನಾಗಿದ್ದೇನೆ. ಶಿವಕುಮಾರ್ ಅವರು ಇನ್ನಾದರೂ ಇಂತಹ ವರ್ತನೆ ಬಿಡಬೇಕು ಎಂದು ಬುದ್ದಿವಾದದ ಮಾತನ್ನು ಬಹಳ ನಯವಾಗಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು