8:03 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಬಂಗ್ರ ಕೂಳೂರು: ಚರಂಡಿ, ಫುಟ್ ಪಾತ್ ನಿರ್ಮಾಣಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

18/03/2023, 17:16

ಮಂಗಳೂರು(reporterkarnataka.com): ಸುಮಾರು1.99 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಬಂಗ್ರಕೂಳೂರು 16ನೇ ವಾರ್ಡ್ ಹಾಗೂ ದೇರೆಬೈಲ್ ಉತ್ತರ ಕೋಡಿಕಲ್ ಮುಖ್ಯ ರಸ್ತೆಯಲ್ಲಿ ಚರಂಡಿ, ಫುಟ್‍ಪಾತ್ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ 2 ವರ್ಷದಲ್ಲಿ ಕೇಂದ್ರ, ರಾಜ್ಯ ಸರಕಾರದ ಸಹಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ನೆರವಿನೊಂದಿಗೆ ಸುಮಾರು 2 ಸಾವಿರ ಕೋಟಿ ರೂ ಅನುದಾನವನ್ನು ಕ್ಷೇತ್ರದ ಮೂಲಸೌಕರ್ಯ ಆದ್ಯತೆ ನೀಡಿ ವಿನಿಯೋಗಿಸಲಾಗಿದೆ. ಬಹುತೇಕ ರಸ್ತೆಗಳು ಶಾಶ್ವತ ರೂಪ ಪಡೆದುಕೊಂಡಿದೆ. ನಗರ, ಹಳ್ಳಿಯ ಸಂಪರ್ಕವಾಗಿದೆ. ಗದ್ದೆ ಪುಣಿಗಳಲ್ಲಿ ಓಡಾಡುತ್ತಿದ್ದ ಕಡೆಗಳಲ್ಲಿ ಬೈಕು, ಕಾರು ಓಡಾಡುವ ರಸ್ತೆ ನಿರ್ಮಾಣವಾಗಿದೆ. ಜನರ ಸಹಕಾರದಲ್ಲಿ ಇದು ಸಾಧ್ಯವಾಗಿದೆ ಎಂದರು.

ಮನಪಾ ಸದಸ್ಯರುಗಳಾದ ಕಿರಣ್ ಕುಮಾರ್ ಕೋಡಿಕಲ್, ಮನೋಜ್ ಕುಮಾರ್, ಹಿರಿಯರಾದ ಗೋಪಾಲ್ ಕೋಟ್ಯಾನ್, ರಾಮದಾಸ್ ನಾಯಕ್, ಉದ್ಯಮಿ ದರ್ಶನ್ ಜೈನ್, ವಿದ್ಯಾಸಾಗರ್, ಲೋಕನಾಥ್ ಬಂಗೇರ, ಶರತ್ ಪಾಲ್ದಾಡಿ, ದಯಮಣಿ ಕೋಟ್ಯಾನ್, ಜಯಲಕ್ಷ್ಮಿ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು