5:09 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಾ19: ಉಜ್ಜಿನಿಯಲ್ಲಿ ಉಚಿತ ಕಣ್ಣು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸ‍ೆ ಶಿಬಿರ

18/03/2023, 23:54

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಸಮಾಜ ಸೇವಕ ಡಾ, ಎನ್.ಟಿ.ಶ್ರೀನಿವಾಸ ಅಭಿಮಾನಿ ಬಳಗದಿಂದ ಶ್ರೀಕ್ಷೇತ್ರ ಉಜ್ಜಿನಿ ಗ್ರಾಮದಲ್ಲಿ, ಉಜ್ಜನಿ ಶ್ರೀಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ, ಸ್ಥಳೀಯ ಮುಖಂಡರ ಹಾಗೂ ಗಣ್ಯಮಾನ್ಯರ ಉಪಸ್ಥಿತಿಯಲ್ಲಿ ಉಚಿತವಾಗಿ ಕಣ್ಣು ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ, ಇತರೆ ಆರೋಗ್ಯ ತಪಾಸಣೆ ಮತ್ತು ಉಚಿತ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.

ಕ್ಷೇತ್ರದ ಮಾಜಿ ಶಾಸಕ ದಿವಂಗತ ಎನ್.ಟಿ.ಬೊಮ್ಮಣ್ಣ ನವರ ಸ್ಮರಣಾರ್ಥ, ಸಮಾಜ ಸೇವಕ ಹಾಗೂ ನೇತ್ರತಜ್ಞರಾದ ಎನ್.ಟಿ.ಶ್ರೀನಿವಾಸ ರವರ ಅಭಿಮಾನಿ ಬಳಗದಿಂದ ಮಾ19ರಂದು ತಾಲೂಕಿನ ಗ್ರಾಮದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ಆಯೋಜಿಸಲಾಗಿದೆ. ಉಜ್ಜಿನಿ ಗ್ರಾಮ ಸೇರಿದಂತೆ, ನೆರೆ ಹೊರೆ ಗ್ರಾಮಗಳು ಹಾಗೂ ವಿವಿದೆಡೆಯ ಗ್ರಾಮಗಳ ಗ್ರಾಮಸ್ಥರು. ಮಾ 19ರಂದು ಭಾನುವಾರ ಬೆಳಗ್ಗೆ 10ರಿಂದ ಉಜ್ಜಿನಿ ಗ್ರಾಮದಲ್ಲಿ, ನಿಗದಿತ ಸ್ಥಳದಲ್ಲಿ ಜರುಗುವ ಶಿಬಿರದಲ್ಲಿ ಚಿಕಿತ್ಸೆಯ ಅಗತ್ಯ ಇರೋರು, ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಸಾರ್ವಜನಿಕರಲ್ಲಿ ಹಾಗೂ ನಾರೀಕರಲ್ಲಿ , ಡಾ,ಎನ್.ಟಿ.ಶ್ರೀನಿವಾಸ ಅಭಿಮ‍ಾನಿ ಬಳಗದಿಂದ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು