10:16 AM Friday3 - May 2024
ಬ್ರೇಕಿಂಗ್ ನ್ಯೂಸ್
ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇತ್ತೀಚಿನ ಸುದ್ದಿ

ಬೋಳೂರಿನಲ್ಲಿ ಮಹಿಳೆಯರಿಗೆ ಬೃಹತ್ ಆರೋಗ್ಯ ಮೇಳ: ತಜ್ಞ ವೈದ್ಯರಿಂದ ತಪಾಸಣೆ

19/03/2023, 00:02

ಮಂಗಳೂರು(reporterkarnataka.com): ನಗರದ ಬೋಳೂರಿನಲ್ಲಿರುವ ಅಮೃತ ವಿದ್ಯಾಲಯದ ಆವರಣದಲ್ಲಿ ಭಾನುವಾರ ಮಾರ್ಚ್ 19ರಂದು ಮಹಿಳೆಯರಿಗೆ ಬೃಹತ್ ಉಚಿತ ಆರೋಗ್ಯ ಮೇಳ ಜರುಗಲಿದೆ.
ಅಮೃತ ಧ್ವನಿ, ಮಾತಾ ಅಮೃತಾನಂದಮಯಿ ಮಠದ ವತಿಯಿಂದ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ. ಕ.,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಆಯುಷ್ ಇಲಾಖೆ , ದೇರಳಕಟ್ಟೆಯ ಏನಪೋಯ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು ಹಾಗೂ ರೋಟರಿ ಕ್ಲಬ್ ಮಂಗಳೂರು ಉತ್ತರ ಇವರ ಸಂಯುಕ್ತ ಆಶ್ರಯದಲ್ಲಿ ವಿವಿಧ ತಜ್ಞ ವೈದ್ಯರು ಮತ್ತು ಆರೋಗ್ಯ ಸೇವಾರ್ಥಿಗಳು ಕಣ್ಣಿನ ಚಿಕಿತ್ಸೆ, ಹಲ್ಲಿನ ಚಿಕಿತ್ಸೆ, ಮಹಿಳೆಯರ ಆರೋಗ್ಯ ತಪಾಸಣೆ, ಅಸಾಂಕ್ರಾಮಿಕ ರೋಗಗಳು, ಕ್ಯಾನ್ಸರ್ ತಪಾಸಣೆ,( Mammography, Pap test) , ಹಿರಿಯ ನಾಗರಿಕರ ಆರೋಗ್ಯ ಸಮಸ್ಯೆಗಳು, ವಾತರೋಗ, ಶ್ವಾಸರೋಗ ಇತ್ಯಾದಿ ಪ್ರಮುಖ ಸಮಸ್ಯೆಗಳ ತಪಾಸಣೆ ನಡೆಸಿ ಚಿಕಿತ್ಸಾ ಸಲಹೆ ನೀಡಲಿರುವರು.
ಬೆಳಗ್ಗೆ 9.00 ರಿಂದ ಮಧ್ಯಾಹ್ನ1.00 ಗಂಟೆಯ ತನಕ ಈ ಸೇವೆ ಲಭಿಸಲಿದೆ. ಮಹಿಳೆಯರು ಇದರ ಪ್ರಯೋಜನ ಪಡೆಯುವಂತೆ ಮನವಿ.

ಇತ್ತೀಚಿನ ಸುದ್ದಿ

ಜಾಹೀರಾತು