2:26 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ

19/03/2023, 00:12

ಮಂಗಳೂರು(reporterkarnataka.com):ಇತಿಹಾಸ ಪ್ರಸಿದ್ದ ಮಂಗಳೂರಿನ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಸಮಗ್ರ ಜೀರ್ಣೋದ್ಧಾರಗೊಂಡು ಮೇ 14ರಿಂದ 24ರ ವರೆಗೆ ನಡೆಯಲಿರುವ ಬ್ರಹ್ಮ ಕಲಶೋತ್ಸವದ ಸಮಾಲೋಚನಾ ಸಭೆ ಕ್ಷೇತ್ರದ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು,
ಸಭೆಯಲ್ಲಿ ಬ್ರಹ್ಮ ಕಲಶೋತ್ಸವದ ಅಧ್ಯಕ್ಷರಾಗಿ ಪ್ರೇಮಾನಂದ ಕುಲಾಲ್ ಅವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಮಾತನಾಡಿ, ದೇವಸ್ಥಾನ ಜೀರ್ಣೋದ್ಧಾರಗೊಂಡಾಗ ಗ್ರಾಮ ಅಭಿವೃದ್ಧಿಯಾಗುತ್ತದೆ. ಸಮಾಜ ಬಲಿಷ್ಠ ಕೊಳ್ಳುತ್ತದೆ. ದೇವಸ್ಥಾನ ಧಾರ್ಮಿಕ ಕೇಂದ್ರವಾಗದೆ ಸಾಮಾಜಿಕ ಶೈಕ್ಷಣಿಕ ಸೇವಾಕಾರ್ಯಗಳ ಕೇಂದ್ರವಾಗಲಿದೆ‌. ವೀರನಾರಾಯಣ ಕ್ಷೇತ್ರ ಹಿಂದು ಸಮಾಜದ ಪವಿತ್ರ ಕ್ಷೇತ್ರವಾಗಲಿದೆ ಎಂದು ನುಡಿದರು‌.

ವೀರನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ಪುರುಷೋತ್ತಮ ಕುಲಾಲ್ ಕಲ್ಪಾವಿ ಜೀರ್ಣೋದ್ಧಾರದ ಪ್ರಕ್ರಿಯೆಗೆಗಳ ಬಗ್ಗೆ ಮತ್ತು ಸಮಿತಿಯ ಪದಾಧಿಕಾರಿಗಳ ಸದಸ್ಯರ ಯಾದಿಯನ್ನು ವಾಚಿಸಿದರು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎ. ದಾಮೋದರ್ ಪ್ರಾಸ್ತಾವಿಕ ಮಾತುಗಳಾಡಿದರು. ವೇದಿಕೆಯಲ್ಲಿ ದೇವಸ್ಥಾನದ ಮಹಿಳಾ ವಿಭಾಗದ ಅಧ್ಯಕ್ಷ ಗೀತಾ ಮನೋಜ್, ಮುಂಬಯಿ ಸಮಿತಿಯ ಅಧ್ಯಕ್ಷ ಬಿ. ದಿನೇಶ್ ಕುಲಾಲ್, ಬೆಂಗಳೂರು ಸಮಿತಿಯ ಅಧ್ಯಕ್ಷ ಮಾಧವ ಕುಲಾಲ್ ಉಪಸ್ಥತರಿದ್ದರು.


ಪ್ರೇಮಾನಂದ ಕುಲಾಲ್ ಮಾತನಾಡುತ್ತಾ ಭಕ್ತಾಭಿಮಾನಿಗಳ ಸಹಕಾರದಿಂದ ದೇವಸ್ಥಾನದ ಜೀರ್ಣೋದಾರದ ಕಾರ್ಯ ವೇಗದಲ್ಲಿ ಸಾಗುತ್ತಿದೆ. ಮುಂದೆ ನಡೆಯಲಿರುವ ಬ್ರಹ್ಮ ಕಲಶ ಅಭೂತಪೂರ್ವಾಗಿ ನಡೆಯುವುದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ನುಡಿದರು.
ಕಾರ್ಯಕ್ರಮವನ್ನು ನ್ಯಾಯವಾದಿ ರವೀಂದ್ರ ಮುನ್ನಿಪಾಡಿ, ನಿರೂಪಿಸಿದರು, ಸದಾಶಿವ ಕುಲಾಲ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು