10:39 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ

19/03/2023, 00:12

ಮಂಗಳೂರು(reporterkarnataka.com):ಇತಿಹಾಸ ಪ್ರಸಿದ್ದ ಮಂಗಳೂರಿನ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಸಮಗ್ರ ಜೀರ್ಣೋದ್ಧಾರಗೊಂಡು ಮೇ 14ರಿಂದ 24ರ ವರೆಗೆ ನಡೆಯಲಿರುವ ಬ್ರಹ್ಮ ಕಲಶೋತ್ಸವದ ಸಮಾಲೋಚನಾ ಸಭೆ ಕ್ಷೇತ್ರದ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು,
ಸಭೆಯಲ್ಲಿ ಬ್ರಹ್ಮ ಕಲಶೋತ್ಸವದ ಅಧ್ಯಕ್ಷರಾಗಿ ಪ್ರೇಮಾನಂದ ಕುಲಾಲ್ ಅವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಮಾತನಾಡಿ, ದೇವಸ್ಥಾನ ಜೀರ್ಣೋದ್ಧಾರಗೊಂಡಾಗ ಗ್ರಾಮ ಅಭಿವೃದ್ಧಿಯಾಗುತ್ತದೆ. ಸಮಾಜ ಬಲಿಷ್ಠ ಕೊಳ್ಳುತ್ತದೆ. ದೇವಸ್ಥಾನ ಧಾರ್ಮಿಕ ಕೇಂದ್ರವಾಗದೆ ಸಾಮಾಜಿಕ ಶೈಕ್ಷಣಿಕ ಸೇವಾಕಾರ್ಯಗಳ ಕೇಂದ್ರವಾಗಲಿದೆ‌. ವೀರನಾರಾಯಣ ಕ್ಷೇತ್ರ ಹಿಂದು ಸಮಾಜದ ಪವಿತ್ರ ಕ್ಷೇತ್ರವಾಗಲಿದೆ ಎಂದು ನುಡಿದರು‌.

ವೀರನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ಪುರುಷೋತ್ತಮ ಕುಲಾಲ್ ಕಲ್ಪಾವಿ ಜೀರ್ಣೋದ್ಧಾರದ ಪ್ರಕ್ರಿಯೆಗೆಗಳ ಬಗ್ಗೆ ಮತ್ತು ಸಮಿತಿಯ ಪದಾಧಿಕಾರಿಗಳ ಸದಸ್ಯರ ಯಾದಿಯನ್ನು ವಾಚಿಸಿದರು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎ. ದಾಮೋದರ್ ಪ್ರಾಸ್ತಾವಿಕ ಮಾತುಗಳಾಡಿದರು. ವೇದಿಕೆಯಲ್ಲಿ ದೇವಸ್ಥಾನದ ಮಹಿಳಾ ವಿಭಾಗದ ಅಧ್ಯಕ್ಷ ಗೀತಾ ಮನೋಜ್, ಮುಂಬಯಿ ಸಮಿತಿಯ ಅಧ್ಯಕ್ಷ ಬಿ. ದಿನೇಶ್ ಕುಲಾಲ್, ಬೆಂಗಳೂರು ಸಮಿತಿಯ ಅಧ್ಯಕ್ಷ ಮಾಧವ ಕುಲಾಲ್ ಉಪಸ್ಥತರಿದ್ದರು.


ಪ್ರೇಮಾನಂದ ಕುಲಾಲ್ ಮಾತನಾಡುತ್ತಾ ಭಕ್ತಾಭಿಮಾನಿಗಳ ಸಹಕಾರದಿಂದ ದೇವಸ್ಥಾನದ ಜೀರ್ಣೋದಾರದ ಕಾರ್ಯ ವೇಗದಲ್ಲಿ ಸಾಗುತ್ತಿದೆ. ಮುಂದೆ ನಡೆಯಲಿರುವ ಬ್ರಹ್ಮ ಕಲಶ ಅಭೂತಪೂರ್ವಾಗಿ ನಡೆಯುವುದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ನುಡಿದರು.
ಕಾರ್ಯಕ್ರಮವನ್ನು ನ್ಯಾಯವಾದಿ ರವೀಂದ್ರ ಮುನ್ನಿಪಾಡಿ, ನಿರೂಪಿಸಿದರು, ಸದಾಶಿವ ಕುಲಾಲ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು