1:19 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ

19/03/2023, 00:12

ಮಂಗಳೂರು(reporterkarnataka.com):ಇತಿಹಾಸ ಪ್ರಸಿದ್ದ ಮಂಗಳೂರಿನ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಸಮಗ್ರ ಜೀರ್ಣೋದ್ಧಾರಗೊಂಡು ಮೇ 14ರಿಂದ 24ರ ವರೆಗೆ ನಡೆಯಲಿರುವ ಬ್ರಹ್ಮ ಕಲಶೋತ್ಸವದ ಸಮಾಲೋಚನಾ ಸಭೆ ಕ್ಷೇತ್ರದ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು,
ಸಭೆಯಲ್ಲಿ ಬ್ರಹ್ಮ ಕಲಶೋತ್ಸವದ ಅಧ್ಯಕ್ಷರಾಗಿ ಪ್ರೇಮಾನಂದ ಕುಲಾಲ್ ಅವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಮಾತನಾಡಿ, ದೇವಸ್ಥಾನ ಜೀರ್ಣೋದ್ಧಾರಗೊಂಡಾಗ ಗ್ರಾಮ ಅಭಿವೃದ್ಧಿಯಾಗುತ್ತದೆ. ಸಮಾಜ ಬಲಿಷ್ಠ ಕೊಳ್ಳುತ್ತದೆ. ದೇವಸ್ಥಾನ ಧಾರ್ಮಿಕ ಕೇಂದ್ರವಾಗದೆ ಸಾಮಾಜಿಕ ಶೈಕ್ಷಣಿಕ ಸೇವಾಕಾರ್ಯಗಳ ಕೇಂದ್ರವಾಗಲಿದೆ‌. ವೀರನಾರಾಯಣ ಕ್ಷೇತ್ರ ಹಿಂದು ಸಮಾಜದ ಪವಿತ್ರ ಕ್ಷೇತ್ರವಾಗಲಿದೆ ಎಂದು ನುಡಿದರು‌.

ವೀರನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ಪುರುಷೋತ್ತಮ ಕುಲಾಲ್ ಕಲ್ಪಾವಿ ಜೀರ್ಣೋದ್ಧಾರದ ಪ್ರಕ್ರಿಯೆಗೆಗಳ ಬಗ್ಗೆ ಮತ್ತು ಸಮಿತಿಯ ಪದಾಧಿಕಾರಿಗಳ ಸದಸ್ಯರ ಯಾದಿಯನ್ನು ವಾಚಿಸಿದರು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎ. ದಾಮೋದರ್ ಪ್ರಾಸ್ತಾವಿಕ ಮಾತುಗಳಾಡಿದರು. ವೇದಿಕೆಯಲ್ಲಿ ದೇವಸ್ಥಾನದ ಮಹಿಳಾ ವಿಭಾಗದ ಅಧ್ಯಕ್ಷ ಗೀತಾ ಮನೋಜ್, ಮುಂಬಯಿ ಸಮಿತಿಯ ಅಧ್ಯಕ್ಷ ಬಿ. ದಿನೇಶ್ ಕುಲಾಲ್, ಬೆಂಗಳೂರು ಸಮಿತಿಯ ಅಧ್ಯಕ್ಷ ಮಾಧವ ಕುಲಾಲ್ ಉಪಸ್ಥತರಿದ್ದರು.


ಪ್ರೇಮಾನಂದ ಕುಲಾಲ್ ಮಾತನಾಡುತ್ತಾ ಭಕ್ತಾಭಿಮಾನಿಗಳ ಸಹಕಾರದಿಂದ ದೇವಸ್ಥಾನದ ಜೀರ್ಣೋದಾರದ ಕಾರ್ಯ ವೇಗದಲ್ಲಿ ಸಾಗುತ್ತಿದೆ. ಮುಂದೆ ನಡೆಯಲಿರುವ ಬ್ರಹ್ಮ ಕಲಶ ಅಭೂತಪೂರ್ವಾಗಿ ನಡೆಯುವುದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ನುಡಿದರು.
ಕಾರ್ಯಕ್ರಮವನ್ನು ನ್ಯಾಯವಾದಿ ರವೀಂದ್ರ ಮುನ್ನಿಪಾಡಿ, ನಿರೂಪಿಸಿದರು, ಸದಾಶಿವ ಕುಲಾಲ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು