10:14 PM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಗ್ರಾಮೀಣ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದೇನೆ: ಕನ್ಯಾನ ಗ್ರಾಮ ಸಡಕ್ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್

20/03/2023, 10:53

ಬಂಟ್ವಾಳ(reporterkarnataka.com):
ರಸ್ತೆಗಳ ಅಭಿವೃದ್ಧಿಗೆ ತನ್ನ ಅವಧಿಯಲ್ಲಿ ಹೆಚ್ಚು ಒತ್ತು ನೀಡಿದ್ದು, ಬಂಟ್ವಾಳ ಕ್ಷೇತ್ರದಾದ್ಯಂತ 1500ಕ್ಕೂ ಅಧಿಕ ಸಂಪರ್ಕ ರಸ್ತೆಗಳಾಗಿವೆ. ಗ್ರಾಮೀಣ ಪ್ರದೇಶದ ರಸ್ತೆಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಅವರು ಕನ್ಯಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 8.10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ರಸ್ತೆ ಅಭಿವೃದ್ಧಿ ಮತ್ತು ಸೇತುವೆ ನಿರ್ಮಾಣವನ್ನು ಉದ್ಘಾಟಿಸಿ ಮಾತನಾಡಿದರು.
8.10 ಕೋಟಿ ರೂ. ವೆಚ್ಚದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ನಿರ್ಮಾಣಗೊಂಡ ಬಾಳೆಕೋಡಿ ಪಿಲಿಂಗುಲಿ, ಅಕ್ಕರೆಕೋಡಿ ಬೆರಿಪದವು ರಸ್ತೆ ಅಭಿವೃದ್ಧಿ ಮತ್ತು ಸೇತುವೆ ನಿರ್ಮಾಣದಿಂದ ಸ್ಥಳೀಯರಿಗೆ ಪ್ರಯೋಜನವಾಗಲಿದೆ ಎಂದರು.


ಗ್ರಾಪಂ ಮಾಜಿ ಅಧ್ಯಕ್ಷ ಕೆ.ಪಿ.ರಘುರಾಮ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಬಿಜೆಪಿ ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಅನೆಯಾಲಗುತ್ತು, ತಾಪಂ ಮಾಜಿ ಸದಸ್ಯರಾದ ಕುಮಾರ ಭಟ್ ಬದಿಕೋಡಿ, ಪಂಚಾಯಿತಿ ಸದಸ್ಯರಾದ ನಾರಾಯಣ ಗೌಡ, ವನಿತಾ ಪಿಲಿಂಗುಳಿ, ಉಪಾಧ್ಯಕ್ಷರಾದ ಕುಸುಮಾ, ಸ್ಥಳದಾನಿಗಳಾದ ಜಯರಾಮ ಶೆಟ್ಟಿ ಪಿಲಿಂಗುಳಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು