9:48 PM Friday14 - August 2026
ಬ್ರೇಕಿಂಗ್ ನ್ಯೂಸ್
ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಇತ್ತೀಚಿನ ಸುದ್ದಿ

ಗ್ರಾಮೀಣ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದೇನೆ: ಕನ್ಯಾನ ಗ್ರಾಮ ಸಡಕ್ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್

20/03/2023, 15:12

ಬಂಟ್ವಾಳ(reporterkarnataka.com):
ರಸ್ತೆಗಳ ಅಭಿವೃದ್ಧಿಗೆ ತನ್ನ ಅವಧಿಯಲ್ಲಿ ಹೆಚ್ಚು ಒತ್ತು ನೀಡಿದ್ದು, ಬಂಟ್ವಾಳ ಕ್ಷೇತ್ರದಾದ್ಯಂತ 1500ಕ್ಕೂ ಅಧಿಕ ಸಂಪರ್ಕ ರಸ್ತೆಗಳಾಗಿವೆ. ಗ್ರಾಮೀಣ ಪ್ರದೇಶದ ರಸ್ತೆಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ಅವರು ಕನ್ಯಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 8.10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ರಸ್ತೆ ಅಭಿವೃದ್ಧಿ ಮತ್ತು ಸೇತುವೆ ನಿರ್ಮಾಣವನ್ನು ಉದ್ಘಾಟಿಸಿ ಮಾತನಾಡಿದರು.


8.10 ಕೋಟಿ ರೂ. ವೆಚ್ಚದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ನಿರ್ಮಾಣಗೊಂಡ ಬಾಳೆಕೋಡಿ ಪಿಲಿಂಗುಲಿ, ಅಕ್ಕರೆಕೋಡಿ ಬೆರಿಪದವು ರಸ್ತೆ ಅಭಿವೃದ್ಧಿ ಮತ್ತು ಸೇತುವೆ ನಿರ್ಮಾಣದಿಂದ ಸ್ಥಳೀಯರಿಗೆ ಪ್ರಯೋಜನವಾಗಲಿದೆ ಎಂದರು.
ಗ್ರಾಪಂ ಮಾಜಿ ಅಧ್ಯಕ್ಷ ಕೆ.ಪಿ.ರಘುರಾಮ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಬಿಜೆಪಿ ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಅನೆಯಾಲಗುತ್ತು, ತಾಪಂ ಮಾಜಿ ಸದಸ್ಯರಾದ ಕುಮಾರ ಭಟ್ ಬದಿಕೋಡಿ, ಪಂಚಾಯಿತಿ ಸದಸ್ಯರಾದ ನಾರಾಯಣ ಗೌಡ, ವನಿತಾ ಪಿಲಿಂಗುಳಿ, ಉಪಾಧ್ಯಕ್ಷರಾದ ಕುಸುಮಾ, ಸ್ಥಳದಾನಿಗಳಾದ ಜಯರಾಮ ಶೆಟ್ಟಿ ಪಿಲಿಂಗುಳಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು