11:31 PM Thursday2 - May 2024
ಬ್ರೇಕಿಂಗ್ ನ್ಯೂಸ್
ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ

ಇತ್ತೀಚಿನ ಸುದ್ದಿ

ಪಾಲಿಕೆ ಕಂಬ್ಳ ವಾರ್ಡ್‌ನಲ್ಲಿ ರಾಜ ಕಾಲುವೆ ತಡೆಗೋಡೆ ನಿರ್ಮಾಣ: ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ

21/03/2023, 13:17

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ 29ನೇ ಕಂಬ್ಳ ವಾರ್ಡ್‌ನ ಕುದ್ರೋಳಿ ಭಗವತಿ ದೇವಸ್ಥಾನ, ಕೊಡಿಯಾಲ್‌ಬೈಲ್ ನಾಗಬನ, ಪ್ರಗತಿ ಸರ್ವಿಸ್ ಸ್ಟೇಶನ್ ಬಳಿ ಎಂಪೈರ್ ಮಾಲ್ ಕಡೆ ಹೋಗುವ ಭಾಗದಲ್ಲಿ ರಾಜ ಕಾಲುವೆ ತಡೆಗೋಡೆ ನಿರ್ಮಾಣಕ್ಕೆ ಇಂದು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಶಿಲಾನ್ಯಾಸ ನೆರವೇರಿಸಿದರು. ಈ ಭಾಗದ ನಿವಾಸಿ ಕೇಶವ ಆಚಾರ್ಯ ಅವರ ನೇತೃತ್ವದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು.

ಒಟ್ಟಾರೆ 1.20 ಕೋಟಿ ರೂ ವೆಚ್ಚದಲ್ಲಿ ಈ ಕಾಮಗಾರಿ ನಡೆಸಲಾಗುತ್ತಿದೆ. ಮಳೆಗಾಲದಲ್ಲಿ ಈ ಭಾಗದ ನಿವಾಸಿಗಳ ಕಷ್ಟ ನಷ್ಟಗಳನ್ನು ನಿವಾರಿಸಲು ತಡೆಗೋಡೆ ನಿರ್ಮಿಸಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಸಮಾಲೋಚಿಸಿ ನೀರಾವರಿ ಇಲಾಖೆಯಿಂದ 100 ಕೋಟಿ ರೂ ಅನುದಾನವನ್ನು ತಡೆಗೋಡೆ ಕಾಮಗಾರಿಗಳಿಗಾಗಿಯೇ ಒದಗಿಸಲಾಗಿದೆ. ಅದನ್ನು ಸದ್ಬಳಕೆ ಮಾಡಿಕೊಂಡು ನಗರದ ನಿವಾಸಿಗಳಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕರು ಈ ಸಂದರ್ಭದಲ್ಲಿ ನುಡಿದರು.
ಉಪಮೇಯರ್ ಪೂರ್ಣಿಮಾ, ನಾರಾಯಣ ಶೆಟ್ಟಿ, ಜಯರಾಮ್ ಶೆಟ್ಟಿ, ಲೋಕನಾಥ್ , ರವಿಕಲಾ ಶೆಟ್ಟಿ, ಮಹಿಳಾ ಮೋರ್ಚಾ ಸದಸ್ಯ ಗೀತಾ, ರಾಧಾಕೃಷ್ಣ ಶೆಟ್ಟಿ, ರಮೇಶ್ ಹೆಗ್ಡೆ, ನೀಲೇಶ್ ಕಾಮತ್, ಪ್ರಕಾಶ್ ನಾಯಕ್, ಪ್ರಕಾಶ್ ಕೋಡಿಯಾಲ್ ಬೈಲ, ವಸಂತ್ ಜೆ ಪೂಜಾರಿ, ಸತೀಶ್ ಕಾಂಚನ್, ನಿಷಿತ್ ಕಾಂಚನ್, ಚಿತ್ರಕಲಾ, ಪ್ರವೀಣ್ ಕುಮಾರ್, ಮೀನಾಕ್ಷಿ, ಮಲ್ಲಿಕಾ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು