5:04 PM Friday9 - May 2025
ಬ್ರೇಕಿಂಗ್ ನ್ಯೂಸ್
J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ

ಇತ್ತೀಚಿನ ಸುದ್ದಿ

ಪಾಲಿಕೆ ಕಂಬ್ಳ ವಾರ್ಡ್‌ನಲ್ಲಿ ರಾಜ ಕಾಲುವೆ ತಡೆಗೋಡೆ ನಿರ್ಮಾಣ: ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ

21/03/2023, 13:17

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ 29ನೇ ಕಂಬ್ಳ ವಾರ್ಡ್‌ನ ಕುದ್ರೋಳಿ ಭಗವತಿ ದೇವಸ್ಥಾನ, ಕೊಡಿಯಾಲ್‌ಬೈಲ್ ನಾಗಬನ, ಪ್ರಗತಿ ಸರ್ವಿಸ್ ಸ್ಟೇಶನ್ ಬಳಿ ಎಂಪೈರ್ ಮಾಲ್ ಕಡೆ ಹೋಗುವ ಭಾಗದಲ್ಲಿ ರಾಜ ಕಾಲುವೆ ತಡೆಗೋಡೆ ನಿರ್ಮಾಣಕ್ಕೆ ಇಂದು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಶಿಲಾನ್ಯಾಸ ನೆರವೇರಿಸಿದರು. ಈ ಭಾಗದ ನಿವಾಸಿ ಕೇಶವ ಆಚಾರ್ಯ ಅವರ ನೇತೃತ್ವದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು.

ಒಟ್ಟಾರೆ 1.20 ಕೋಟಿ ರೂ ವೆಚ್ಚದಲ್ಲಿ ಈ ಕಾಮಗಾರಿ ನಡೆಸಲಾಗುತ್ತಿದೆ. ಮಳೆಗಾಲದಲ್ಲಿ ಈ ಭಾಗದ ನಿವಾಸಿಗಳ ಕಷ್ಟ ನಷ್ಟಗಳನ್ನು ನಿವಾರಿಸಲು ತಡೆಗೋಡೆ ನಿರ್ಮಿಸಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಸಮಾಲೋಚಿಸಿ ನೀರಾವರಿ ಇಲಾಖೆಯಿಂದ 100 ಕೋಟಿ ರೂ ಅನುದಾನವನ್ನು ತಡೆಗೋಡೆ ಕಾಮಗಾರಿಗಳಿಗಾಗಿಯೇ ಒದಗಿಸಲಾಗಿದೆ. ಅದನ್ನು ಸದ್ಬಳಕೆ ಮಾಡಿಕೊಂಡು ನಗರದ ನಿವಾಸಿಗಳಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕರು ಈ ಸಂದರ್ಭದಲ್ಲಿ ನುಡಿದರು.
ಉಪಮೇಯರ್ ಪೂರ್ಣಿಮಾ, ನಾರಾಯಣ ಶೆಟ್ಟಿ, ಜಯರಾಮ್ ಶೆಟ್ಟಿ, ಲೋಕನಾಥ್ , ರವಿಕಲಾ ಶೆಟ್ಟಿ, ಮಹಿಳಾ ಮೋರ್ಚಾ ಸದಸ್ಯ ಗೀತಾ, ರಾಧಾಕೃಷ್ಣ ಶೆಟ್ಟಿ, ರಮೇಶ್ ಹೆಗ್ಡೆ, ನೀಲೇಶ್ ಕಾಮತ್, ಪ್ರಕಾಶ್ ನಾಯಕ್, ಪ್ರಕಾಶ್ ಕೋಡಿಯಾಲ್ ಬೈಲ, ವಸಂತ್ ಜೆ ಪೂಜಾರಿ, ಸತೀಶ್ ಕಾಂಚನ್, ನಿಷಿತ್ ಕಾಂಚನ್, ಚಿತ್ರಕಲಾ, ಪ್ರವೀಣ್ ಕುಮಾರ್, ಮೀನಾಕ್ಷಿ, ಮಲ್ಲಿಕಾ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು