12:01 AM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾದರೆ ಕಂಟ್ರೋಲ್ ರೂಮ್‍ಗೆ ಕರೆ ಮಾಡಿ ದೂರು ನೀಡಿ

21/03/2023, 21:49

ಮಂಗಳೂರು(reporterkarnataka.com): 2023ನೇ ಸಾಲಿನಲ್ಲಿ ರಾಜ್ಯ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ಸಂಬಂಧ ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಅಕ್ರಮ ಮದ್ಯ, ಬೀರ್ ತಯಾರಿಕೆ, ದಾಸ್ತಾನು ಹಾಗೂ ಸಾಗಾಣಿಕೆ ಬಗ್ಗೆ ಸಾರ್ವಜನಿಕರಿಂದ ನೀಡಲಾಗುವ ದೂರುಗಳನ್ನು ಸ್ವೀಕರಿಸಲು ಹಾಗೂ ಚುನಾವಣಾ ಆಯೋಗದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತ್ತು ಚುನಾವಣೆಯನ್ನು ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಅಬಕಾರಿ ಇಲಾಖೆಯ ಜಿಲ್ಲಾ ಕೇಂದ್ರ ಕಚೇರಿಯಲ್ಲಿ, ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಮ್ ಗಳನ್ನು ತೆರೆಯಲಾಗಿದೆ.
ಈ ಕಂಟ್ರೋಲ್ ರೂಮ್‍ಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಅಬಕಾರಿ ಅಕ್ರಮಗಳ ಬಗ್ಗೆ ಮಾಹಿತಿಯನ್ನು ಕಂಟ್ರೋಲ್ ರೂಂ. ಗಳ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು.
ನಗರದ ಮೇರಿಹಿಲ್‍ನಲ್ಲಿರುವ ಅಬಕಾರಿ ಉಪ ಆಯುಕ್ತರ ಕಚೇರಿ ಟೋಲ್ ಫ್ರೀ ಸಂಖ್ಯೆ 1800 -4253872, ದೂ.ಸಂಖ್ಯೆ:0824 – 2213872. ಬಂಟ್ವಾಳ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08255-232726, ಬೆಳ್ತಂಗಡಿ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08256-298757, ಪುತ್ತೂರು ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08251-238481, ಸುಳ್ಯ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08257-231309 ಅನ್ನು ಸಂಪರ್ಕಿಸಬಹುದು ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು