9:56 AM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾದರೆ ಕಂಟ್ರೋಲ್ ರೂಮ್‍ಗೆ ಕರೆ ಮಾಡಿ ದೂರು ನೀಡಿ

21/03/2023, 21:49

ಮಂಗಳೂರು(reporterkarnataka.com): 2023ನೇ ಸಾಲಿನಲ್ಲಿ ರಾಜ್ಯ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ಸಂಬಂಧ ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಅಕ್ರಮ ಮದ್ಯ, ಬೀರ್ ತಯಾರಿಕೆ, ದಾಸ್ತಾನು ಹಾಗೂ ಸಾಗಾಣಿಕೆ ಬಗ್ಗೆ ಸಾರ್ವಜನಿಕರಿಂದ ನೀಡಲಾಗುವ ದೂರುಗಳನ್ನು ಸ್ವೀಕರಿಸಲು ಹಾಗೂ ಚುನಾವಣಾ ಆಯೋಗದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತ್ತು ಚುನಾವಣೆಯನ್ನು ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಅಬಕಾರಿ ಇಲಾಖೆಯ ಜಿಲ್ಲಾ ಕೇಂದ್ರ ಕಚೇರಿಯಲ್ಲಿ, ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಮ್ ಗಳನ್ನು ತೆರೆಯಲಾಗಿದೆ.
ಈ ಕಂಟ್ರೋಲ್ ರೂಮ್‍ಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಅಬಕಾರಿ ಅಕ್ರಮಗಳ ಬಗ್ಗೆ ಮಾಹಿತಿಯನ್ನು ಕಂಟ್ರೋಲ್ ರೂಂ. ಗಳ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು.
ನಗರದ ಮೇರಿಹಿಲ್‍ನಲ್ಲಿರುವ ಅಬಕಾರಿ ಉಪ ಆಯುಕ್ತರ ಕಚೇರಿ ಟೋಲ್ ಫ್ರೀ ಸಂಖ್ಯೆ 1800 -4253872, ದೂ.ಸಂಖ್ಯೆ:0824 – 2213872. ಬಂಟ್ವಾಳ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08255-232726, ಬೆಳ್ತಂಗಡಿ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08256-298757, ಪುತ್ತೂರು ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08251-238481, ಸುಳ್ಯ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08257-231309 ಅನ್ನು ಸಂಪರ್ಕಿಸಬಹುದು ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು