10:48 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಂಗಳೂರು : ಎರಡೂ ಡೋಸ್ ಲಸಿಕೆ ಪಡೆದಿದ್ದ ಪೋಲಿಸ್ ಸಿಬಂಧಿ ಕೋವಿಡ್‌ಗೆ ಬಲಿ

14/05/2021, 16:42

ಮಂಗಳೂರು(Reporter Karnataka News)

ಸಿಎಆರ್ ವಿಭಾಗದಲ್ಲಿ ಸೇವೆಯಲ್ಲಿದ್ದ ಬೆಳಗಾವಿ ಮೂಲದ ಸಿದ್ದಪ್ಪ ಶಿಂಗೆ(50) ಅವರು ಕೋವಿಡ್ 19ಕ್ಕೆ ಬಲಿಯಾದ ಪೋಲಿಸ್ ಸಿಬಂಧಿ.

ಕೋವಿಡ್ ಎರಡೂ ಲಸಿಕೆಯನ್ನು ಪಡೆದಿದ್ದ ಸಿದ್ದಪ್ಪ ಶಿಂಗೆ ಅವರನ್ನು ಮೇ 5ರಂದು ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆರಂಭದಲ್ಲೇ ಆಕ್ಸಿಜನ್ ಕೊಟ್ಟು ಚಿಕಿತ್ಸೆ ನೀಡಲಾಗಿತ್ತು. ಆದರೆ, ದೇಹಸ್ಥಿತಿ ಬದಲಾವಣೆ ಆಗದೆ ಮೃತರಾಗಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯರ್ನಾಳ್ ಎಂಬ ಊರಿನ ನಿವಾಸಿ. ಮಿಲಿಟರಿಯಲ್ಲಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಬಳಿಕ 2016ರಲ್ಲಿ ಪೊಲೀಸ್ ಇಲಾಖೆ ಸೇರಿದ್ದರು. ಸಿದ್ದಪ್ಪ ಅವರಿಗೆ ಬೇರಾವುದೇ ಕಾಯಿಲೆಗಳು ಇರಲಿಲ್ಲ. ಹಾಗಿದ್ದರೂ ಸಾವಿನ ಸಂದರ್ಭದಲ್ಲಿ ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು