9:46 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಕ್ಷೇತ್ರದಲ್ಲಿ 6500ಕ್ಕೂ ಹೆಚ್ಚು ಮಂದಿಗೆ ಹಕ್ಕುಪತ್ರ ವಿತರಣೆ: ಶಾಸಕ ಡಾ. ಭರತ್ ಶೆಟ್ಟಿ ಸಾಧನೆ

24/03/2023, 10:18

ಮಂಗಳೂರು(reporterkarnataka.com): ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇದುವರೆಗೆ 6500ಕ್ಕೂ ಹೆಚ್ಚು ಹಕ್ಕುಪತ್ರ ನೀಡಲಾಗಿದೆ. ಇತರ ಯಾವುದೇ ಅಭಿವೃದ್ಧಿ ಕಾರ್ಯದ ಶಿಲಾನ್ಯಾಸ ಅಥವಾ ಉದ್ಘಾಟನೆ ಮಾಡುವುದಕ್ಕಿಂತ ಹೆಚ್ಚಿನ ಸಂತೃಪ್ತಿ, ಹಕ್ಕುಪತ್ರ ಸ್ವೀಕರಿಸುವಾಗ ಜನರ ಮುಖದಲ್ಲಿ ಕಾಣುತ್ತೇವೆ. ಜನಹಿತಕ್ಕಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡಿದಲ್ಲಿ ಯಾವುದೇ ಕೆಲಸ ಕಷ್ಟಕರವಾಗದು. ಇಲ್ಲವಾದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಸಮತೋಲನ ಸಿಗದು ಎಂದು ಶಾಸಕರ ಡಾ. ಭರತ್ ಶೆಟ್ಟಿ ಹೇಳಿದರು.

ಕಂದಾವರ ಪಂಚಾಯತ್ ವ್ಯಾಪ್ತಿಯ ಕೌಡೂರಿನಲ್ಲಿ ಆಯೋಜಿಸಲಾದ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಕಂದಾವರ ಪಂಚಾಯತ್ ವ್ಯಾಪ್ತಿಯ ಕೊಳಂಬೆ ಗ್ರಾಮದ ಕೌಡೂರಿನಲ್ಲಿ ನಿವೇಶನ

ಹಸ್ತಾಂತರದ ಜೊತೆಗೆ 170 ಕುಟುಂಬಗಳಿಗೆ ಹಕ್ಕುಪತ್ರ ನೀಡಿ ಮಾತನಾಡಿ, ಈಗ ಗುರುತಿಸಲಾದ ನಿವೇಶನದಲ್ಲಿ ಕಚ್ಚಾ ರಸ್ತೆ ನಿರ್ಮಿಸಲಾಗಿದೆ. ನಿಮ್ಮ ಆಶೀರ್ವಾದವಿದ್ದಲ್ಲಿ ಖಂಡಿತವಾಗಿಯೂ ಮುಂದಿನ ಅವಧಿಗೆ ಇಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಳ್ಳಲಿದೆ ಎಂದರು.
ಶಾಸಕರು ಹಕ್ಕುಪತ್ರದ ಮೂಲಪ್ರತಿ ವಿತರಿಸಿದರು. ಪಂಚಾಯತ್ ಅಧ್ಯಕ್ಷ ಉಮೇಶ, ಪಿಡಿಒ ಸೌಮ್ಯ ಹಾಗೂ ಗುರುಪುರ ನಾಡಕಚೇರಿಯ ಉಪತಹಶೀಲ್ದಾರ್ ಶಿವಪ್ರಸಾದ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು