11:15 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ತೆನೆ ಭಾರ ಇಳಿಸಿ ಕೈ ಹಿಡಿಯಲು ಮುಂದಾದ ಜೆಡಿಎಸ್ ಹಿರಿಯ ಮುಖಂಡ ಬಿ. ಎಲ್. ದೇವರಾಜು: ಮುಂದಿನ ವಾರ ಸೇರ್ಪಡೆ

24/03/2023, 23:09

ಮನು ಮಾಕವಳ್ಳಿ ಕೆ. ಆರ್. ಪೇಟೆ ಮಂಡ್ಯ

info.reporterkarnataka@gmail.ಕಾಂ

ಜಾತ್ಯತೀತ ಜನತಾದಳ ಪಕ್ಷದ ಹಿರಿಯ ಮುಖಂಡ, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್ ದೇವರಾಜು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಇದೇ ಸೋಮವಾರ ಕಾಂಗ್ರೆಸ್ ರಾಜ್ಯ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದರು.


ಕೆ. ಆರ್. ಪೇಟೆ ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಲ್ಲಿ ಬೆಂಬಲಿಗರು ಮತ್ತು ಅಭಿಮಾನಿಗಳು ಸಮ್ಮುಖದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೆಡಿಎಸ್ ಪಕ್ಷದಲ್ಲಿ ಸತತವಾಗಿ 40 ವರ್ಷದಿಂದ ಪ್ರಾಮಾಣಿಕ ಕಾರ್ಯಕರ್ತರಂತೆ ಪಕ್ಷಕ್ಕೆ ದುಡಿದಿದ್ದೇನೆ. ಜೆಡಿಎಸ್ ಪಕ್ಷಕ್ಕೆ ನನ್ನ ಸೇವೆ ಅಪಾರವಾಗಿದೆ. ನನಗೆ ಎರಡು ಬಾರಿ ಸಂಕಷ್ಟ ಸಮಯದಲ್ಲೇ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಿದರು. ಆದರೆ ಈಗ ಗೆಲ್ಲುವ ಸಮಯದಲ್ಲಿ ನಮ್ಮನ್ನು ಪರಿಗಣಿಸುತ್ತಿಲ್ಲ. ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಮೇಲೆ ಆಪಾದನೆ ಮಾಡಿದ ವ್ಯಕ್ತಿಗಳಿಗೆ ಸ್ಥಾನಮಾನ ದೊರಕುತ್ತಿದೆ. ನಮ್ಮಂತ ಪ್ರಾಮಾಣಿಕರಿಗೆ ಜೆಡಿಎಸ್ ನಲ್ಲಿ ಸ್ಥಳವಿಲ್ಲ, ನಮ್ಮನ್ನು ಪರಿಗಣಿಸಿ ಎಂದು ಎರಡು ಬಾರಿ ಬೃಹತ್ ಕಾರ್ಯಕರ್ತ ಸಮಾವೇಶದ ಮೂಲಕ ಟಿಕೆಟ್ ಮರುಪರಿಶೀಲನೆ ಮಾಡಿ ಎಂದು ಬಹಿರಂಗ ಸಭೆ ಮಾಡಿದರು ಕೂಡ ನನ್ನ ಮತ್ತು ಬೆಂಬಲಿಗರು ಅಭಿಮಾನಿಗಳನ್ನ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಗೇಡಿಗಳು ಎಂದು ಭಾವಿಸಿದರು. ಜೆಡಿಎಸ್ ಪಕ್ಷ ಹಿಂದಿನಿಂದಲೂ ಪಕ್ಷದ ನಿಷ್ಠಾವಂತರಿಗೆ ಗೌರವಿಸುವ ಕೆಲಸ ಮಾಡಿಲ್ಲ. ಹಾಗಾಗಿ ಜೆಡಿಎಸ್ ಪಕ್ಷ ತೊರೆದು ಸೋಮವಾರ ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಪ್ರತಿಪಕ್ಷದ
ನಾಯಕ ಸಿದ್ದರಾಮಯ್ಯ, ಕೇಂದ್ರ ಮಾಜಿ ಸಚಿವ ರೆಹಮಾನ್ ಖಾನ್, ಮಾಜಿ ಸಚಿವ ಚೆಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತೇನೆ ಎಂದು ಜೆಡಿಎಸ್ ಹಿರಿಯ ಮುಖಂಡ ದೇವರಾಜು ತಿಳಿಸಿದರು.
ಬಳಿಕ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ ಗಂಗಾಧರ್ ರಾಜ್ಯಾದ್ಯಂತ ಅಧಿಕಾರ ಚುಕ್ಕಾಣಿ ಹಿಡಿಯುವುದು ನಿಶ್ಚಯ ಎಂಬ ಕೂಗು ಹಬ್ಬರಿಸುತ್ತಿರುವ ಸಂದರ್ಭದಲ್ಲಿಯೇ ತಾಲೂಕಿನಲ್ಲಿ 40 ವರ್ಷ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಂತೆ ದುಡಿದ ಬಿ.ಎಲ್. ದೇವರಾಜು ನಮ್ಮ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಅವರ ಆತ್ಮೀಯರು ಹಾಗೂ ಪಕ್ಷದ ಮುಖಂಡರುಗಳನ್ನು ನಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ನಮ್ಮಗೆ ಆನೆ ಬಲಬಂದಂತಾಗಿದೆ ಅವರನ್ನು ತುಂಬುಹೃದಯದಿಂದ ಸ್ವಾಗತಿಸಿ ಮುಂದಿನ ದಿನಗಳಲ್ಲಿ ಅವರನ್ನ ಗುರುತಿಸುವ ಕೆಲಸ ನಮ್ಮ ಪಕ್ಷ ಪ್ರಾಮಾಣಿಕವಾಗಿ ಮಾಡುತ್ತದೆ ಎಂದು ಹೇಳಿದರು.
ನಂತರ ತಾಲೂಕಿನ ಮಾಜಿ ಶಾಸಕ ಕೆ. ಬಿ. ಚಂದ್ರಶೇಖರ್, ಮಾಜಿ ಶಾಸಕ ಬಿ. ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್ ಐಪನಹಳ್ಳಿ ನಾಗೇಂದ್ರ ಕುಮಾರ್, ಹಿರಿಯ ಮುಖಂಡ ಎಂ ಡಿ ಕೃಷ್ಣಮೂರ್ತಿ ರವರು ಜೊತೆಗೂಡಿ ಬಿ.ಎಲ್ ದೇವರಾಜು ಕೈ ಮೇಲಕ್ಕೆತ್ತುವ ಮೂಲಕ ಒಗ್ಗಟ್ಟಿನ ಸಂಕೇತ ಸಾರಿದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡ ಬಸ್ ಕೃಷ್ಣೆಗೌಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ರಾಮದಾಸ್, ವಿಠಲಪುರ ಸುಬ್ಬೆಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಶಶಿಧರ್ ಸಂಗಾಪುರ, ಕಂಠಿ ರಮೇಶ್, ಅಲಂಬಾಡಿ ರಾಜು,ನಟನಹಳ್ಳಿ ಪವನ್, ದೊಡ್ಡಗಾಡಿಗನಹಳ್ಳಿ ಲೋಕೇಶ್, ಕುಂದನಹಳ್ಳಿ ಜಿಲ್ಲಾ ಕಾಂಗ್ರೆಸ್ ವಕ್ತರ ಡಾ.ರಾಮಕೃಷ್ಣೇಗೌಡ ಮಾದಾಪುರ,ರಾಜಯ್ಯ, ರಾಜಣ್ಣ,ಯೂಥ್ ಕಾಂಗ್ರೆಸ್ ಅಧ್ಯಕ್ಷ ಚಿಕ್ಕೋನಹಳ್ಳಿ ಚೇತನ್, ಗಾಣದಹಳ್ಳಿ ಅಶೋಕ್, ದಿನೇಶ್, ಕೆರೆಕೊಡಿ ಆನಂದ, ಚಂದ್ರು,ಸೇರಿದಂತೆ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು