2:56 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕ್ರಿಕೆಟ್ ಗೆ ಸಮಾನವಾಗಿ ದೇಶಿ ಕ್ರೀಡೆ ಕಬಡ್ಡಿ ಬೆಳೆಯುತ್ತಿದೆ: ಬೂಕನಕೆರೆಯಲ್ಲಿ ಎಚ್.ಟಿ. ಮಂಜು

24/03/2023, 23:33

ಮನು ಮಾಕವಳ್ಳಿ ಕೆ. ಆರ್. ಪೇಟೆ ಮಂಡ್ಯ

info.reporterkarnataka@gmail.com

ಕ್ರಿಕೆಟ್‌ಗೆ ಸಮಾನವಾಗಿ ದೇಶಿ ಕ್ರೀಡೆ ಕಬಡ್ಡಿ ಬೆಳೆಯುತ್ತಿದೆ. ಮೊದಲು ಆಟು ಆಡುವರಿಗೆ ಪಾಲಕರು ಬೈಯುತ್ತಿದ್ದರು. ಆದರೆ ಇಂದು ಆಟದಲ್ಲಿ ಮುಂದೆ ಬರುವವರಿಗೆ ದೇಶದಲ್ಲಿ ಉತ್ತಮ ಗೌರವವಿದೆ ಎಂದು ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ಎಚ್. ಟಿ. ಮಂಜು ಹೇಳಿದರು.
ಕೆ.ಆರ್. ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಕೂಡಲಕುಪ್ಪೆ ಗ್ರಾಮದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಶ್ರೀ ವಿನಾಯಕ ಗೆಳೆಯರ ಬಳಗದ ವತಿಯಿಂದ ಹಾಗೂ ಗೆಳೆಯ ಅಭಿ (ಚಿಂಟು) ರವರ ಸವಿ ನೆನಪಿಗಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯುವಕರು ಗ್ರಾಮೀಣ ಭಾಗದ ಕ್ರೀಡೆಯಾದ ಕಬಡ್ಡಿ ಪಂದ್ಯಾವಳಿಯನ್ನು ಈ ಸುಂದರ ವಾತಾವರಣದಲ್ಲಿ ಆಯೋಜಿಸಿ ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ಆಟಗಾರರಿಗೆ ಕರೆಸಿ ಅವರ ಪ್ರತಿಭೆಗಳನ್ನು ಕೂಡ ಗುರುತಿಸುವ ಕೆಲಸ ಮಾಡುತ್ತಿರುವುದು ಅಭಿನಂದನಾರ್ಹ. ಇತ್ತೀಚಿನ ದಿನಗಳಲ್ಲಿ ಕ್ರೀಡೆಗೆ ತನ್ನದೇ ಆದಂತಹ ಮಹತ್ವವನ್ನು ಪಡೆದುಕೊಂಡಿದೆ. ಕೇವಲ ಅವರು ಓದಿನೊಂದಿಗೆ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂಬಂತಹ ಸ್ಥಿತಿ ಈಗ ಇಲ್ಲ. ಕ್ರೀಡೆಯಲ್ಲಿಯೂ ಕೂಡ ಉತ್ತಮ ಸಾಧನೆ ಮಾಡಿ ಇದು ರಾಜ್ಯ ಮತ್ತು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಕೂಡ ಕೀರ್ತಿ ಮತ್ತು ಗೌರವವನ್ನು ಸಂಪಾದಿಸುವಂತಹ ಕೆಲಸಗಳಾಗುತ್ತವೆ ಎಂದು ಮಂಜು ಹೇಳಿದರು.

ಬಳಿಕ ಮಾತನಾಡಿದ ಸಮಾಜ ಸೇವಕ ಆರ್ ಟಿ ಓ ಮಲ್ಲಿಕಾರ್ಜುನ್, ಪ್ರತಿ ಗ್ರಾಮದಲ್ಲಿಯೂ ಕೂಡ ಈ ರೀತಿ ಕ್ರೀಡಾಕೂಟಗಳನ್ನು ಆಯೋಜನೆ ಮಾಡುವ ಮೂಲಕ ಗ್ರಾಮೀಣ ಭಾಗದ ಯುವ ಪ್ರತಿಭೆಗಳಿಗೆ ಒಂದು ವೇದಿಕೆಯನ್ನು ಸೃಷ್ಟಿಸಿ ಅವರನ್ನು ಕೂಡ ಹೊರಜಗತ್ತಿಗೆ ಗುರುತಿಸುವ ಕೆಲಸ ಗಳಾಗುತ್ತಿದ್ದು ಮುಂದಿನ ದಿನಗಳಲ್ಲಿ ನಮ್ಮ ರಾಜ್ಯದ್ಯಂತ ಇನ್ನು ಹೆಚ್ಚೆಚ್ಚು ಕ್ರೀಡಾಕೂಟ ರೂಪಿಸಲು ಕ್ರೀಡಾ ಆಯೋಜಕರು ಮುಂದಾಗಬೇಕು. ಈ ಕಬಡ್ಡಿ ಕ್ರೀಡೆ ಕೇವಲ ಗ್ರಾಮೀಣ ಮಟ್ಟದಲ್ಲಿ ಉಳಿದುಕೊಂಡಿಲ್ಲ ಇದೀಗ ರಾಜ್ಯ ಮತ್ತು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಠದಲ್ಲಿ ಕೂಡ ವಿಶೇಷ ಸ್ಥಾನ ಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿ ಇದು ಒಲಂಪಿಕ್ ನಲ್ಲಿ ಕೂಡ ಸ್ಥಾನ ಪಡೆಯುವ ಸಾಧ್ಯತೆಗಳಿವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಸಾಧುಗೋನಹಳ್ಳಿ ಲೋಕೇಶ್,ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪಾಪೇಗೌಡ, ಶಿವರಾಮ್, ಯೋಗೇಶ್, ಪ್ರಹ್ಲಾದ, ಗ್ರಾಮ ಪಂಚಾಯಿತಿ ಸದಸ್ಯರುಗೋಳಾದ ಲೋಕೇಶ್, ಪಿ.ಟಿ.ಜಿ ಕೊಪ್ಪಲು ಕುಮಾರ್, ರೈತ ಸಂಘದ ಮುಖಂಡ ಮಂಜುನಾಥ್, ಹರೀಶ್, ರಾಘು, ದಿನೇಶ್, ಆಕಾಶ್, ಪ್ರಶಾಂತ್, ಕೃಷ್ಣಚಾರಿ, ಸೇರಿದಂತೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು