11:21 PM Saturday26 - July 2025
ಬ್ರೇಕಿಂಗ್ ನ್ಯೂಸ್
ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ…

ಇತ್ತೀಚಿನ ಸುದ್ದಿ

ಕೂಳೂರಿನಲ್ಲಿ ಅಯ್ಯಪ್ಪ ದೇವಸ್ಥಾನ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಶಂಕುಸ್ಥಾಪನೆ

26/03/2023, 00:15

ಸುರತ್ಕಲ್(reporterkarnataka.com):
ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿ ಹೊಸ ಸೇತುವೆ ನಿರ್ಮಾಣ ಸಂದರ್ಭ ಸ್ಥಳಾಂತರಗೊಂಡಿದ್ದ ಕೂಳೂರು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಶಾಸಕ ಡಾ.ಭರತ್‌ ಶೆಟ್ಟಿ ವೈ ಶಂಕು ಸ್ಥಾಪನೆ ನೆರವೇರಿಸಿದರು.
ದೇವಸ್ಥಾನ ಸರಕಾರಿ ಭೂಮಿಯಲ್ಲಿದ್ದರೂ, ಸ್ಥಳಾಂತರದ ಸಂದರ್ಭ ಇದರ ಸಮಿತಿಯವರು ಶಾಸಕರಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿ ದೊರಕಿಸುವಂತೆ ಮನವಿ ಮಾಡಿದ ಮೇರೆಗೆ ಬಂಗ್ರಕೂಳೂರು ರಸ್ತೆ ಬದಿ 55 ಸೆಂಟ್ ಸರಕಾರಿ ಜಾಗವನ್ನು ಮಾಡಿಕೊಟ್ಟಿದ್ದು, ಈ ಸಂದರ್ಭ ಸಮಿತಿ ವತಿಯಿಂದ ಶಾಸಕರನ್ನು ಸಮ್ಮಾನಿಸಲಾಯಿತು. ಮುಂದಿನ ದಿನಗಳಲ್ಲಿ ಅಯ್ಯಪ್ಪ ಮಾಲಾ ವೃತಧಾರಿಗಳಿಗೆ ಇಲ್ಲಿ ತಂಗಲು ಸಮುದಾಯ ಭವನದ ಭರವಸೆಯನ್ನು ಶಾಸಕರು ನೀಡಿದರು.


ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮನಪಾ ಸದಸ್ಯ ಅನಿಲ್‌ ಕುಮಾರ್, ದೇವಸ್ಥಾನದ ಸಮಿತಿ ಗೌರವಾಧ್ಯಕ್ಷ ಸುರೇಶಂದ್ರ ಶೆಟ್ಟಿ, ಪ್ರಮುಖರಾದ ಪ್ರಜ್ಞೇಶ್ ಶೆಟ್ಟಿ, ರಮೇಶ್ ಶೆಟ್ಟಿ, ದೇವಸ್ಥಾನದ ತಂತ್ರಿಗಳು, ಆಡಳಿತ ಸಮಿತಿಯವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು