6:40 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕೂಳೂರಿನಲ್ಲಿ ಅಯ್ಯಪ್ಪ ದೇವಸ್ಥಾನ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಶಂಕುಸ್ಥಾಪನೆ

26/03/2023, 00:15

ಸುರತ್ಕಲ್(reporterkarnataka.com):
ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿ ಹೊಸ ಸೇತುವೆ ನಿರ್ಮಾಣ ಸಂದರ್ಭ ಸ್ಥಳಾಂತರಗೊಂಡಿದ್ದ ಕೂಳೂರು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಶಾಸಕ ಡಾ.ಭರತ್‌ ಶೆಟ್ಟಿ ವೈ ಶಂಕು ಸ್ಥಾಪನೆ ನೆರವೇರಿಸಿದರು.
ದೇವಸ್ಥಾನ ಸರಕಾರಿ ಭೂಮಿಯಲ್ಲಿದ್ದರೂ, ಸ್ಥಳಾಂತರದ ಸಂದರ್ಭ ಇದರ ಸಮಿತಿಯವರು ಶಾಸಕರಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿ ದೊರಕಿಸುವಂತೆ ಮನವಿ ಮಾಡಿದ ಮೇರೆಗೆ ಬಂಗ್ರಕೂಳೂರು ರಸ್ತೆ ಬದಿ 55 ಸೆಂಟ್ ಸರಕಾರಿ ಜಾಗವನ್ನು ಮಾಡಿಕೊಟ್ಟಿದ್ದು, ಈ ಸಂದರ್ಭ ಸಮಿತಿ ವತಿಯಿಂದ ಶಾಸಕರನ್ನು ಸಮ್ಮಾನಿಸಲಾಯಿತು. ಮುಂದಿನ ದಿನಗಳಲ್ಲಿ ಅಯ್ಯಪ್ಪ ಮಾಲಾ ವೃತಧಾರಿಗಳಿಗೆ ಇಲ್ಲಿ ತಂಗಲು ಸಮುದಾಯ ಭವನದ ಭರವಸೆಯನ್ನು ಶಾಸಕರು ನೀಡಿದರು.


ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮನಪಾ ಸದಸ್ಯ ಅನಿಲ್‌ ಕುಮಾರ್, ದೇವಸ್ಥಾನದ ಸಮಿತಿ ಗೌರವಾಧ್ಯಕ್ಷ ಸುರೇಶಂದ್ರ ಶೆಟ್ಟಿ, ಪ್ರಮುಖರಾದ ಪ್ರಜ್ಞೇಶ್ ಶೆಟ್ಟಿ, ರಮೇಶ್ ಶೆಟ್ಟಿ, ದೇವಸ್ಥಾನದ ತಂತ್ರಿಗಳು, ಆಡಳಿತ ಸಮಿತಿಯವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು