8:36 PM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕೂಳೂರಿನಲ್ಲಿ ಅಯ್ಯಪ್ಪ ದೇವಸ್ಥಾನ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಶಂಕುಸ್ಥಾಪನೆ

26/03/2023, 00:15

ಸುರತ್ಕಲ್(reporterkarnataka.com):
ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿ ಹೊಸ ಸೇತುವೆ ನಿರ್ಮಾಣ ಸಂದರ್ಭ ಸ್ಥಳಾಂತರಗೊಂಡಿದ್ದ ಕೂಳೂರು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಶಾಸಕ ಡಾ.ಭರತ್‌ ಶೆಟ್ಟಿ ವೈ ಶಂಕು ಸ್ಥಾಪನೆ ನೆರವೇರಿಸಿದರು.
ದೇವಸ್ಥಾನ ಸರಕಾರಿ ಭೂಮಿಯಲ್ಲಿದ್ದರೂ, ಸ್ಥಳಾಂತರದ ಸಂದರ್ಭ ಇದರ ಸಮಿತಿಯವರು ಶಾಸಕರಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿ ದೊರಕಿಸುವಂತೆ ಮನವಿ ಮಾಡಿದ ಮೇರೆಗೆ ಬಂಗ್ರಕೂಳೂರು ರಸ್ತೆ ಬದಿ 55 ಸೆಂಟ್ ಸರಕಾರಿ ಜಾಗವನ್ನು ಮಾಡಿಕೊಟ್ಟಿದ್ದು, ಈ ಸಂದರ್ಭ ಸಮಿತಿ ವತಿಯಿಂದ ಶಾಸಕರನ್ನು ಸಮ್ಮಾನಿಸಲಾಯಿತು. ಮುಂದಿನ ದಿನಗಳಲ್ಲಿ ಅಯ್ಯಪ್ಪ ಮಾಲಾ ವೃತಧಾರಿಗಳಿಗೆ ಇಲ್ಲಿ ತಂಗಲು ಸಮುದಾಯ ಭವನದ ಭರವಸೆಯನ್ನು ಶಾಸಕರು ನೀಡಿದರು.


ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮನಪಾ ಸದಸ್ಯ ಅನಿಲ್‌ ಕುಮಾರ್, ದೇವಸ್ಥಾನದ ಸಮಿತಿ ಗೌರವಾಧ್ಯಕ್ಷ ಸುರೇಶಂದ್ರ ಶೆಟ್ಟಿ, ಪ್ರಮುಖರಾದ ಪ್ರಜ್ಞೇಶ್ ಶೆಟ್ಟಿ, ರಮೇಶ್ ಶೆಟ್ಟಿ, ದೇವಸ್ಥಾನದ ತಂತ್ರಿಗಳು, ಆಡಳಿತ ಸಮಿತಿಯವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು