12:07 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕೂಳೂರಿನಲ್ಲಿ ಅಯ್ಯಪ್ಪ ದೇವಸ್ಥಾನ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಶಂಕುಸ್ಥಾಪನೆ

26/03/2023, 00:15

ಸುರತ್ಕಲ್(reporterkarnataka.com):
ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿ ಹೊಸ ಸೇತುವೆ ನಿರ್ಮಾಣ ಸಂದರ್ಭ ಸ್ಥಳಾಂತರಗೊಂಡಿದ್ದ ಕೂಳೂರು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಶಾಸಕ ಡಾ.ಭರತ್‌ ಶೆಟ್ಟಿ ವೈ ಶಂಕು ಸ್ಥಾಪನೆ ನೆರವೇರಿಸಿದರು.
ದೇವಸ್ಥಾನ ಸರಕಾರಿ ಭೂಮಿಯಲ್ಲಿದ್ದರೂ, ಸ್ಥಳಾಂತರದ ಸಂದರ್ಭ ಇದರ ಸಮಿತಿಯವರು ಶಾಸಕರಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿ ದೊರಕಿಸುವಂತೆ ಮನವಿ ಮಾಡಿದ ಮೇರೆಗೆ ಬಂಗ್ರಕೂಳೂರು ರಸ್ತೆ ಬದಿ 55 ಸೆಂಟ್ ಸರಕಾರಿ ಜಾಗವನ್ನು ಮಾಡಿಕೊಟ್ಟಿದ್ದು, ಈ ಸಂದರ್ಭ ಸಮಿತಿ ವತಿಯಿಂದ ಶಾಸಕರನ್ನು ಸಮ್ಮಾನಿಸಲಾಯಿತು. ಮುಂದಿನ ದಿನಗಳಲ್ಲಿ ಅಯ್ಯಪ್ಪ ಮಾಲಾ ವೃತಧಾರಿಗಳಿಗೆ ಇಲ್ಲಿ ತಂಗಲು ಸಮುದಾಯ ಭವನದ ಭರವಸೆಯನ್ನು ಶಾಸಕರು ನೀಡಿದರು.


ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮನಪಾ ಸದಸ್ಯ ಅನಿಲ್‌ ಕುಮಾರ್, ದೇವಸ್ಥಾನದ ಸಮಿತಿ ಗೌರವಾಧ್ಯಕ್ಷ ಸುರೇಶಂದ್ರ ಶೆಟ್ಟಿ, ಪ್ರಮುಖರಾದ ಪ್ರಜ್ಞೇಶ್ ಶೆಟ್ಟಿ, ರಮೇಶ್ ಶೆಟ್ಟಿ, ದೇವಸ್ಥಾನದ ತಂತ್ರಿಗಳು, ಆಡಳಿತ ಸಮಿತಿಯವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು