3:19 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕಾಟಿಪಳ್ಳ 3ನೇ ವಾರ್ಡ್: 1.70 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ; ಶಾಸಕ ಡಾ. ಭರತ್ ಶೆಟ್ಟಿ ಲೋಕಾರ್ಪಣೆ

27/03/2023, 11:10

ಸುರತ್ಕಲ್(reporterkarnataka.com): ಸುಮಾರು1.70 ಕೋಟಿ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕಾಟಿಪಳ್ಳ‌ 3ನೇ ವಾರ್ಡ್‌ನಲ್ಲಿ ಗುದ್ದಲಿ ಪೂಜೆ‌ ಹಾಗೂ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಯನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ನೆರವೇರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಗಣೇಶಪುರ ಮೈದಾನದ ಬಳಿ ಉದ್ಯಾನವನಕ್ಕೆ ಗುದ್ದಲಿ ಪೂಜೆ, 2 ನೇ ವಿಭಾಗ ಸರಕಾರಿ ಶಾಲೆಯ ಮುಂದುವರಿದ ಕೊಠಡಿ ನಿರ್ಮಾಣಕ್ಕೆ ಗುದ್ದಲಿ‌ ಪೂಜೆ, ಆದರ್ಶ ಯುವಕ‌ ಮಂಡಲ(ರಿ) ಕಟ್ಟಡ ಮೇಲ್ವಾಚಾವಣಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮತ್ತು ಆದಿಶಕ್ತಿ ದೇವಸ್ಥಾನ ದಿಂದ ಹಿಂದೂ ರುದ್ರಭೂಮಿಯ ಮುಖ್ಯರಸ್ತೆಯ ಕಾಂಕ್ರೀಟಿಕರಣದ ಲೋಕಾರ್ಪಣೆ, ಕಾಟಿಪಳ್ಳ‌ ಹಿಂದೂ‌ ರುದ್ರಭೂಮಿಯ ಲೋಕಾರ್ಪಣೆ ಮಾಡಲಾಗಿದೆ ಎಂದು ತಿಳಿಸಿದರು.
ಮೇಯರ್ ಜಯಾನಂದ ಅಂಚನ್‌, ಕಾಟಿಪಳ್ಳ‌ 3ನೇ ವಾರ್ಡ್ ಮನಪಾ ಸದಸ್ಯರಾದ ಲೋಕೇಶ್ ಬೊಳ್ಳಾಜೆ, 6ನೇ ವಾರ್ಡ್ ಮನಪಾ ಸದಸ್ಯರಾದ ಸರಿತಾ ಶಶಿಧರ್ , ಬಿಜೆಪಿ ಉತ್ತರ ಮಂಡಲ ಅಧ್ಯಕ್ಷರಾದ ತಿಲಕ್‌ರಾಜ್ ಕೃಷ್ಣಾಪುರ, ಅ.ಭಾ.ಸೇ.ಟ್ರಸ್ಟ್ ನ ಅಧ್ಯಕ್ಷ
ಜಯಕುಮಾರ್, ಹಿಂದು ರುದ್ರಭೂಮಿ ನವೀಕರಣ ಸಮಿತಿ ಸದಸ್ಯರು, ಪಂಚಾಯತ್ ಸದಸ್ಯರಾದ ನವಿನ್ ಶೆಟ್ಟಿ ಮತ್ತು ಪದ್ಮನಾಭ ಸಾಲ್ಯಾನ್ ಹಾಗೂ ವಿವಿಧ‌ ಜವಾಬ್ದಾರಿಯುತ ಮಂಡಲ ಪ್ರಮುಖರು, ಶಕ್ತಿಕೇಂದ್ರ ಪ್ರಮುಖರು, ವಾರ್ಡ್ ಪ್ರಮುಖರು, ಬೂತ್ ಪ್ರಮುಖರು, ಪಕ್ಷದ ಕಾರ್ಯಕರ್ತರು, ಊರಿನ ಜವಬ್ದಾರಿಯುತ ನಾಗರಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು