11:44 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಾಟಿಪಳ್ಳ 3ನೇ ವಾರ್ಡ್: 1.70 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ; ಶಾಸಕ ಡಾ. ಭರತ್ ಶೆಟ್ಟಿ ಲೋಕಾರ್ಪಣೆ

27/03/2023, 11:10

ಸುರತ್ಕಲ್(reporterkarnataka.com): ಸುಮಾರು1.70 ಕೋಟಿ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕಾಟಿಪಳ್ಳ‌ 3ನೇ ವಾರ್ಡ್‌ನಲ್ಲಿ ಗುದ್ದಲಿ ಪೂಜೆ‌ ಹಾಗೂ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಯನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ನೆರವೇರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಗಣೇಶಪುರ ಮೈದಾನದ ಬಳಿ ಉದ್ಯಾನವನಕ್ಕೆ ಗುದ್ದಲಿ ಪೂಜೆ, 2 ನೇ ವಿಭಾಗ ಸರಕಾರಿ ಶಾಲೆಯ ಮುಂದುವರಿದ ಕೊಠಡಿ ನಿರ್ಮಾಣಕ್ಕೆ ಗುದ್ದಲಿ‌ ಪೂಜೆ, ಆದರ್ಶ ಯುವಕ‌ ಮಂಡಲ(ರಿ) ಕಟ್ಟಡ ಮೇಲ್ವಾಚಾವಣಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮತ್ತು ಆದಿಶಕ್ತಿ ದೇವಸ್ಥಾನ ದಿಂದ ಹಿಂದೂ ರುದ್ರಭೂಮಿಯ ಮುಖ್ಯರಸ್ತೆಯ ಕಾಂಕ್ರೀಟಿಕರಣದ ಲೋಕಾರ್ಪಣೆ, ಕಾಟಿಪಳ್ಳ‌ ಹಿಂದೂ‌ ರುದ್ರಭೂಮಿಯ ಲೋಕಾರ್ಪಣೆ ಮಾಡಲಾಗಿದೆ ಎಂದು ತಿಳಿಸಿದರು.
ಮೇಯರ್ ಜಯಾನಂದ ಅಂಚನ್‌, ಕಾಟಿಪಳ್ಳ‌ 3ನೇ ವಾರ್ಡ್ ಮನಪಾ ಸದಸ್ಯರಾದ ಲೋಕೇಶ್ ಬೊಳ್ಳಾಜೆ, 6ನೇ ವಾರ್ಡ್ ಮನಪಾ ಸದಸ್ಯರಾದ ಸರಿತಾ ಶಶಿಧರ್ , ಬಿಜೆಪಿ ಉತ್ತರ ಮಂಡಲ ಅಧ್ಯಕ್ಷರಾದ ತಿಲಕ್‌ರಾಜ್ ಕೃಷ್ಣಾಪುರ, ಅ.ಭಾ.ಸೇ.ಟ್ರಸ್ಟ್ ನ ಅಧ್ಯಕ್ಷ
ಜಯಕುಮಾರ್, ಹಿಂದು ರುದ್ರಭೂಮಿ ನವೀಕರಣ ಸಮಿತಿ ಸದಸ್ಯರು, ಪಂಚಾಯತ್ ಸದಸ್ಯರಾದ ನವಿನ್ ಶೆಟ್ಟಿ ಮತ್ತು ಪದ್ಮನಾಭ ಸಾಲ್ಯಾನ್ ಹಾಗೂ ವಿವಿಧ‌ ಜವಾಬ್ದಾರಿಯುತ ಮಂಡಲ ಪ್ರಮುಖರು, ಶಕ್ತಿಕೇಂದ್ರ ಪ್ರಮುಖರು, ವಾರ್ಡ್ ಪ್ರಮುಖರು, ಬೂತ್ ಪ್ರಮುಖರು, ಪಕ್ಷದ ಕಾರ್ಯಕರ್ತರು, ಊರಿನ ಜವಬ್ದಾರಿಯುತ ನಾಗರಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು