1:19 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಮೂಡಿಗೆರೆ ಪೊಲೀಸ್ ಠಾಣೆ ಎದುರೇ ಬಿಜೆಪಿಯ ಎರಡು ಗುಂಪಿನ ನಡುವೆ ವಾರ್: ಕೈಕೈ ಮಿಲಾಯಿಸಿದ ಕಾರ್ಯಕರ್ತರು; ಮೂಕ ಪ್ರೇಕ್ಷಕರಾದ ಖಾಕಿ ಪಡೆ!

27/03/2023, 23:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಪೊಲೀಸ್ ಠಾಣೆಯ ಎದುರೇ ಬಿಜೆಪಿಯ ಎರಡು ಬಿಜೆಪಿ ಗುಂಪಿನ ಮಧ್ಯೆ ವಾರ್ ನಡೆದಿದೆ. ಹಲವು ದಿನಗಳಿಂದ ಇದ್ದ ಅಸಮಾಧಾನ ಸೋಮವಾರ ಸ್ಫೋಟಗೊಂಡಿದೆ.
ಸ್ಟೇಷನ್ ಎದುರಿನ ಆಟೋ ನಿಲ್ದಾಣದ ವಿಚಾರದಲ್ಲಿ ಕಿರಿಕ್ ನಡೆದಿದೆ. ಶಾಸಕ ಕುಮಾರಸ್ವಾಮಿ ಹಾಗೂ ಎಂ.ಎಲ್.ಸಿ. ಪ್ರಾಣೇಶ್ ಬೆಂಬಲಿಗರ ಮಧ್ಯೆ ಗಲಾಟೆ ನಡೆದಿದೆ.


ಆಟೋ ನಿಲ್ದಾಣದ ಬಳಿ ನೆರಳಿಗಾಗಿ ಎಂ.ಎಲ್.ಸಿ. ನಿಧಿಯಲ್ಲಿ ಶೆಡ್ ನಿರ್ಮಾಣ ಮಾಡಲಾಗಿತ್ತು.
ಶೆಡ್ ತೆರವಿಗೆ ಮುಂದಾದ ಪಟ್ಣಣ ಪಂಚಾಯಿತಿ ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಇಬ್ಬರು ನಾಯಕರ ಬೆಂಬಲಿಗರ ಮಧ್ಯೆ ಸಂಘರ್ಷ ಏರ್ಪಟ್ಟಿದೆ.
ಠಾಣಾ ಸರಹದ್ದಿನಲ್ಲಿ, ಪೊಲೀಸರ ಎದುರೇ ಬಿಜೆಪಿಯ ಎರಡು ಗುಂಪಿನ ಕಾರ್ಯಕರ್ತರು ಕೈ-ಕೈ ಮಿಲಾಯಿಸಿದ್ದಾರೆ. ಮೂಡಿಗೆರೆ ಬಿಜೆಪಿ ಟಿಕೆಟ್ ವಿಚಾರಕ್ಕೂ ಈ ಗಲಾಟೆಗೆ ಸಂಬಂಧವಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು