8:49 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ನರಿಕೊಂಬು ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಗೆ ಜಿಲ್ಲಾಮಟ್ಟದ ಅತ್ಯುತ್ತಮ ಎಸ್ ಡಿಎಂಸಿ ಪ್ರಶಸ್ತಿ

29/03/2023, 10:00

ಬಂಟ್ವಾಳ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಅತ್ಯುತ್ತಮ‌ ಎಸ್.ಡಿ.ಎಂ.ಸಿ. ಪ್ರಶಸ್ತಿಗೆ ನರಿಕೊಂಬು ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಆಯ್ಕೆಯಾಗಿದ್ದು, ಇತ್ತೀಚೆಗೆ ನೇರಳಕಟ್ಟೆಯಲ್ಲಿ ನಡೆದ ಜಿಲ್ಲಾಮಟ್ಟದ ಸಮಾವೇಶದಲ್ಲಿ ಈ ಪ್ರಶಸ್ತಿಯನ್ನು ನರಿಕೊಂಬು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಸ್ವೀಕರಿಸಿದರು.
ಸರ್ಕಾರಿ ಶಾಲೆಯನ್ನು ಮಾದರಿಯಾದ ರೀತಿಯಲ್ಲಿ‌ ಅಭಿವೃದ್ದಿ ಗೊಳಿಸಿರುವುದು ಹಾಗೂ ಎಸ್ ಡಿ.ಎಂಸಿಯ ಕ್ರಿಯಾಶೀಲತೆಗೆ ಈ ಪ್ರಶಸ್ತಿ‌ ನೀಡಲಾಗಿದೆ. ಎಸ್.ಡಿ.ಎಂ.ಸಿ ಗೆ ದೊರೆತ ಪ್ರಶಸ್ತಿಯನ್ನು ಶಾಲೆಗೆ ಅರ್ಪಿಸುವ ಕಾರ್ಯಕ್ರಮವೂ ಅರ್ಥಪೂರ್ಣವಾಗಿ ನಡೆದಿದ್ದು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಅಂಚನ್ ನೇತೃತ್ವದಲ್ಲಿ ಸರ್ವ ಸದಸ್ಯರು ಶಾಲೆಗೆ ಆಗಮಿಸಿ ಪ್ರಶಸ್ತಿ ಪತ್ರ ಹಾಗೂ ಫಲಕವನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಪ್ರಶಸ್ತಿ ಪುರಸ್ಕೃತ ಎಸ್ ಡಿಎಂಸಿ ಯನ್ನು ಬ್ಯಾಂಡ್ ವಾದ್ಯದ ಘೋಷಣೆಗಳೊಂದಿಗೆ ಶಾಲೆಗೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ವೃಂದ ಸ್ವಾಗತಿಸಿ, ಪುಷ್ಪ ಸಿಂಚನದೊಂದಿಗೆ ವೇದಿಕೆಗೆ ಬರಮಾಡಿಕೊಂಡ ಕ್ಷಣ ಆತ್ಮೀಯತೆಯ ಜೊತೆಗೆ ಭಾವನಾತ್ಮಕವಾಗಿತ್ತು.ಈ ಸಂದರ್ಭದಲ್ಲಿ..
ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್, ಉಪಾಧ್ಯಕ್ಷೆ ಯಶೋಧ, ತಾಯಂದಿರ ಸಮಿತಿಯ ಅಧ್ಯಕ್ಷೆ, ನರಿಕೊಂಬು ಗ್ರಾಮ ಪಂಚಾಯತಿ ಸದಸ್ಯೆ ಉಷಾಲಾಕ್ಷಿ, ತಾಯಂದಿರ ಸಮಿತಿಯ ಉಪಾಧ್ಯಕ್ಷೆ ಮೇಘ, ಶಾಲಾ ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ, ಶಾಲೆಯ ಪೋಷಕ ಬಂಧುಗಳು, ವಿದ್ಯಾರ್ಥಿ ಸಮೂಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು