1:06 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಮತ್ತೆ ಖಾಸಗಿ ಬಸ್ ಅಟ್ಟಹಾಸ: ಮಹಿಳೆ ಬಲಿ; ಇದು ರಸ್ತೆ ಭಯೋತ್ಪಾದನೆ ಅಲ್ವೇ? ಎನ್ನುವುದು ಜನರ ಪ್ರಶ್ನೆ; ಎಸಿಪಿಯವರೇ ದಯವಿಟ್ಟು ಉತ್ತರಿಸಿ

30/03/2023, 15:36

ಮಂಗಳೂರು(reporterkarnataka.com): ಖಾಸಗಿ ಬಸ್ಸುಗಳ ಅಟ್ಟಹಾಸಕ್ಕೆ ಒಂದೇ ವಾರದಲ್ಲಿ ಒಂದೇ ಕಡೆ ಎರಡನೇ ಬಲಿ ನಡೆದಿದೆ. ರಸ್ತೆ ದಾಟುತ್ತಿದ್ದ ಮಹಿಳೆಯನ್ನು ಸಿಟಿ ಬಸ್ಸೊಂದು ಅಪೋಷಣ ಮಾಡಿದ ಘಟನೆ ನಗರದ ಬೆಂದೂರ್ ವೆಲ್ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.
ಕಂಕನಾಡಿ ಕಡೆಗೆ ಚಲಿಸುತ್ತಿದ್ದ ಸಿಟಿ ಬಸ್ ಬೆಂದೂರ್ ವೆಲ್ ಸಮೀಪ ರಸ್ತೆ ದಾಟುತ್ತಿದ್ದಾಗ ಮಹಿಳೆಯ ಮೇಲೆ ಹರಿದು ಹೋದ ಪರಿಣಾಮ ಮಹಿಳೆ
ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆದಿದೆ.
ಬಸ್ ಚಾಲಕನ ನಿರ್ಲಕ್ಷ್ಯಹಾಗೂ ಅಜಾಕರೂಕತೆಯ ಚಾಲನೆಯಿಂದ ಈ ದುರ್ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. ಮೃತ ಮಹಿಳೆ ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇಡಲಾಗಿದೆ.
ಅಪರಾಧ ಮತ್ತು ಟ್ರಾಫಿಕ್ ವಿಭಾಗದ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ಗೀತಾ ಕುಲಕರ್ಣಿ ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂದೂರುವೆಲ್ ಜಂಕ್ಷನ್ ನಲ್ಲಿ ಮಾರ್ಚ್ 24 ರಂದು ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು11 ವರ್ಷದ ಬಾಲಕ ಸಾವನ್ನಪ್ಪಿದ್ದ. ಸ್ಕೂಟರ್ ಚಾಲನೆ ಮಾಡುತ್ತಿದ್ದ ಬಾಲಕನ ತಾಯಿ ತೀವ್ರವಾಗಿ ಗಾಯಗೊಂಡಿದ್ದರು. ಅದಕ್ಕಿಂತ ಸ್ವಲ್ಪ ದಿನ ಮುನ್ನ ನಂತೂರು ಜಂಕ್ಷನ್ ನಲ್ಲಿ ಟಿಪ್ಪರ್ ಲಾರಿ ಚಾಲಕ ಸ್ಕೂಟರ್ ವೊಂದನ್ನು ಅಡಿಗೆ ಹಾಕಿ ಇಬ್ಬರ ಸಾವಿಗೆ ಕಾರಣನಾಗಿದ್ದ. ಸಾವನ್ನಪ್ಪಿದವರಲ್ಲಿ ಬಾಲಕಿ ಸೇರಿದ್ದಳು. ಇದೊಂದು ರೀತಿಯ ರಸ್ತೆ ಭಯೋತ್ಪಾದನೆ ಅಲ್ವೇ ಎಂದು ಮಂಗಳೂರು ನಾಗರಿಕರು ಪ್ರಶ್ಬಿಸುತ್ತಿದ್ದಾರೆ. ಟ್ರಾಫಿಕ್ ಎಸಿಪಿಯವರೇ ದಯವಿಟ್ಟು ಉತ್ತರ ಕೊಡಿ.

ಇತ್ತೀಚಿನ ಸುದ್ದಿ

ಜಾಹೀರಾತು