1:52 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮಂಗಳೂರು: 160 ಮೀನುಗಾರ ಮಹಿಳೆಯರಿಗೆ ಶಾಖ ನಿರೋಧಕ ಪೆಟ್ಟಿಗೆ ವಿತರಣೆ

30/03/2023, 23:09

ಮಂಗಳೂರು(reporterkarnataka.com) ರಾಜ್ಯ ವಲಯ ಯೋಜನೆಯಡಿ ಮೀನುಗಾರ ಮಹಿಳೆಯರಿಗೆ ರಾಜ್ಯ ಸರಕಾರವು ಉಚಿತವಾಗಿ ನೀಡುವ ಶಾಖ ನಿರೋಧಕ ಪೆಟ್ಟಿಗೆಗಳನ್ನು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕೇಂದ್ರ ಹಾಗೂ ರಾಜ್ಯ ಸರಕಾರವು ಮೀನುಗಾರರ ಹಿತದೃಷ್ಟಿಯಿಂದ ವಿವಿಧ ಯೋಜನೆಗಳನ್ನು, ಸವಲತ್ತುಗಳನ್ನು ಜಾರಿಗೆ ತಂದಿದೆ. ಕೇಂದ್ರ ಸರಕಾರವು ಮತ್ಸ್ಯ ಸಂಪದ ಯೋಜನೆಯಡಿ ಆಳ ಸಮುದ್ರ ಮೀನುಗಾರಿಕೆ ನಡೆಸುವವರಿಗೆ ಬೋಟ್, ಇನ್ಸುಲೇಟೆಡ್ ವಾಹನಗಳು ಸೇರಿದಂತೆ ವಿವಿಧ ಯೋಜನೆಗಳನ್ನು ನೀಡುವ ಮೂಲಕ ಮೀನುಗಾರರ ಹಿತ ಕಾಪಾಡುವ ಕೆಲಸ ಮಾಡಿದೆ. ನಗರದ ಮೀನು ಮಾರುಕಟ್ಟೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೂ ಕೂಡ ವಿಶೇಷವಾಗಿ ಚಿಂತನೆ ನಡೆಸಲಾಗಿದ್ದು, ಸ್ಥಳೀಯ ಮೀನುಗಾರರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ನಾಡದೋಣಿಗಳಿಗೆ ಸೀಮೆ ಎಣ್ಣೆ, ನದಿಯಲ್ಲಿ ಮೀನುಗಾರಿಕೆ ಮಾಡುವವರಿಗೆ ಬಲೆ, ಸಬ್ಸಿಡಿ ಡೀಸೆಲ್, ಮೀನುಗಾರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ ಸ್ಕಾಲರ್ಶಿಪ್ ನೀಡುವ ಮೂಲರ ಆಸರೆಯಾಗಿದೆ. ಸದ್ಯ ರಾಜ್ಯ ವಲಯ ಯೋಜನೆಯಡಿ ನಗರದಲ್ಲಿ 160 ಮೀನು ಮಾರಾಟ ಮಹಿಳೆಯರಿಗೆ ಶಾಖ ನಿರೋಧಕ ಪೆಟ್ಟಿಗೆಗಳನ್ನು ಒದಗಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯ ಮೀನುಗಾರಿಕಾ ನಿಗಮದ ನಿಕಟಪೂರ್ವ ಅಧ್ಯಕ್ಷರಾದ ನಿತಿನ್ ಕುಮಾರ್ ಮಾತನಾಡಿ, ಬಿಜೆಪಿ ಸರಕಾರವು ಸದಾ ಬೆನ್ನೆಲುಬಾಗಿ ನಿಂತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ನೀಡಿದ ಯೋಜನೆಗಳು ಹಾಗೂ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಹಾಗೂ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಮೀನು ಮಾರಾಟಗಾರ ಮಹಿಳೆಯರ ಸಂಘದ ಅಧ್ಯಕ್ಷರಾದ ಬೇಬಿ ಅಮೀನ್, ಉಪಾಧ್ಯಕ್ಷರಾದ ಮೋಹನ್, ಹದಿನಾರು ಪಟ್ನ ಮೀನುಗಾರ ಸಂಯುಕ್ತ ಸಭಾದ ಉಪಾಧ್ಯಕ್ಷ ಸುಭಾಷ್ ಕಾಂಚನ್, ಮುಖಂಡರಾದ ಹೇಮಚಂದ್ರ ಸಾಲ್ಯಾನ್, ಸುಗಂಧಿ ಉಳ್ಳಾಲ್, ಇಲಾಖೆಯ ಅಧಿಕಾರಿ ನಳಿನಿ ಮತ್ತು ಇತರೆ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು