3:09 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಬಂಡಾಯ, ವಲಸೆ ತಡೆಗೆ ಕೇಸರಿ ಪ್ಲ್ಯಾನ್: ಬಿಜೆಪಿ ಮೊದಲ ಪಟ್ಟಿ ಇನ್ನಷ್ಟು ವಿಳಂಬ ಸಾಧ್ಯತೆ; ಹಾಲಿ ಶಾಸಕರಿಗೂ ಟಿಕೆಟ್ ಕೈತಪ್ಪುವ ಸಾಧ್ಯತೆ

31/03/2023, 10:34

ರಘುನಂದನ್ ಕೊರಟಗೆರೆ ಬೆಂಗಳೂರು

info.reporterkarnataka@gmail.com

ಪಕ್ಷದೊಳಗಿನ ಬಂಡಾಯ ಹಾಗೂ ವಲಸೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇನ್ನಷ್ಟು ವಿಳಂಬವಾಗುವ ಲಕ್ಷಣ ಕಂಡು ಬರುತ್ತಿದೆ. ಹೆಚ್ಚು ಕಡಿಮೆ ವಾರದ ಬಳಿಕ ಅಂದ್ರೆ ಏ.7ರ ಬಳಿಕ ಪ್ರಥಮ ಯಾದಿ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಟಿಕೆಟ್ ಸಂಬಂಧಿಸಿದಂತೆ ಜಿಲ್ಲಾಮಟ್ಟದಿಂದ ರಾಜ್ಯಮಟ್ಟದ ವರೆಗೆ ಅಭಿಪ್ರಾಯ ಸಂಗ್ರಹ ನಡೆಯಲಿದೆ. ಇಂದಿನಿಂದಲೇ ಈ ಕಾರ್ಯ ಆರಂಭಗೊಳ್ಳಲಿದೆ. ನಂತರ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಳೆದು ತೂಗಿ ಟಿಕೆಟ್ ಹಂಚಿಕೆ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ಕೆಲವು ಹಾಲಿ ಶಾಸಕರಿಗೂ ಟಿಕೆಟ್ ಕೈತಪ್ಪಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ಕೋರ್ ಕಮಿಟಿಯ ಸಭೆ ಏಪ್ರಿಲ್ 4ರ ಬಳಿಕ ನಡೆಯಲಿದೆ. ಅಭಿಪ್ರಾಯ ಸಂಗ್ರಹದ ಬಳಿಕ ಶಾರ್ಟ್ ಲಿಸ್ಟ್ ಸೆಂಟ್ರಲ್ ಕೋರ್ ಕಮಿಟಿಗೆ ಹೋಗಲಿದೆ. ಹಾಲಿ ಶಾಸಕರಲ್ಲಿ ಯಾರಿಗೆ ಟಿಕೆಟ್ ನೀಡಬೇಕು, ಯಾರಿಗೆ ನೀಡಬಾರದು ಎನ್ನುವ ಕುರಿತು ಬಿಜೆಪಿ ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು