8:37 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬಂಡಾಯ, ವಲಸೆ ತಡೆಗೆ ಕೇಸರಿ ಪ್ಲ್ಯಾನ್: ಬಿಜೆಪಿ ಮೊದಲ ಪಟ್ಟಿ ಇನ್ನಷ್ಟು ವಿಳಂಬ ಸಾಧ್ಯತೆ; ಹಾಲಿ ಶಾಸಕರಿಗೂ ಟಿಕೆಟ್ ಕೈತಪ್ಪುವ ಸಾಧ್ಯತೆ

31/03/2023, 10:34

ರಘುನಂದನ್ ಕೊರಟಗೆರೆ ಬೆಂಗಳೂರು

info.reporterkarnataka@gmail.com

ಪಕ್ಷದೊಳಗಿನ ಬಂಡಾಯ ಹಾಗೂ ವಲಸೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇನ್ನಷ್ಟು ವಿಳಂಬವಾಗುವ ಲಕ್ಷಣ ಕಂಡು ಬರುತ್ತಿದೆ. ಹೆಚ್ಚು ಕಡಿಮೆ ವಾರದ ಬಳಿಕ ಅಂದ್ರೆ ಏ.7ರ ಬಳಿಕ ಪ್ರಥಮ ಯಾದಿ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಟಿಕೆಟ್ ಸಂಬಂಧಿಸಿದಂತೆ ಜಿಲ್ಲಾಮಟ್ಟದಿಂದ ರಾಜ್ಯಮಟ್ಟದ ವರೆಗೆ ಅಭಿಪ್ರಾಯ ಸಂಗ್ರಹ ನಡೆಯಲಿದೆ. ಇಂದಿನಿಂದಲೇ ಈ ಕಾರ್ಯ ಆರಂಭಗೊಳ್ಳಲಿದೆ. ನಂತರ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಳೆದು ತೂಗಿ ಟಿಕೆಟ್ ಹಂಚಿಕೆ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ಕೆಲವು ಹಾಲಿ ಶಾಸಕರಿಗೂ ಟಿಕೆಟ್ ಕೈತಪ್ಪಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ಕೋರ್ ಕಮಿಟಿಯ ಸಭೆ ಏಪ್ರಿಲ್ 4ರ ಬಳಿಕ ನಡೆಯಲಿದೆ. ಅಭಿಪ್ರಾಯ ಸಂಗ್ರಹದ ಬಳಿಕ ಶಾರ್ಟ್ ಲಿಸ್ಟ್ ಸೆಂಟ್ರಲ್ ಕೋರ್ ಕಮಿಟಿಗೆ ಹೋಗಲಿದೆ. ಹಾಲಿ ಶಾಸಕರಲ್ಲಿ ಯಾರಿಗೆ ಟಿಕೆಟ್ ನೀಡಬೇಕು, ಯಾರಿಗೆ ನೀಡಬಾರದು ಎನ್ನುವ ಕುರಿತು ಬಿಜೆಪಿ ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು