6:43 AM Wednesday12 - November 2025
ಬ್ರೇಕಿಂಗ್ ನ್ಯೂಸ್
ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

ಬಂಡಾಯ, ವಲಸೆ ತಡೆಗೆ ಕೇಸರಿ ಪ್ಲ್ಯಾನ್: ಬಿಜೆಪಿ ಮೊದಲ ಪಟ್ಟಿ ಇನ್ನಷ್ಟು ವಿಳಂಬ ಸಾಧ್ಯತೆ; ಹಾಲಿ ಶಾಸಕರಿಗೂ ಟಿಕೆಟ್ ಕೈತಪ್ಪುವ ಸಾಧ್ಯತೆ

31/03/2023, 10:34

ರಘುನಂದನ್ ಕೊರಟಗೆರೆ ಬೆಂಗಳೂರು

info.reporterkarnataka@gmail.com

ಪಕ್ಷದೊಳಗಿನ ಬಂಡಾಯ ಹಾಗೂ ವಲಸೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇನ್ನಷ್ಟು ವಿಳಂಬವಾಗುವ ಲಕ್ಷಣ ಕಂಡು ಬರುತ್ತಿದೆ. ಹೆಚ್ಚು ಕಡಿಮೆ ವಾರದ ಬಳಿಕ ಅಂದ್ರೆ ಏ.7ರ ಬಳಿಕ ಪ್ರಥಮ ಯಾದಿ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಟಿಕೆಟ್ ಸಂಬಂಧಿಸಿದಂತೆ ಜಿಲ್ಲಾಮಟ್ಟದಿಂದ ರಾಜ್ಯಮಟ್ಟದ ವರೆಗೆ ಅಭಿಪ್ರಾಯ ಸಂಗ್ರಹ ನಡೆಯಲಿದೆ. ಇಂದಿನಿಂದಲೇ ಈ ಕಾರ್ಯ ಆರಂಭಗೊಳ್ಳಲಿದೆ. ನಂತರ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಳೆದು ತೂಗಿ ಟಿಕೆಟ್ ಹಂಚಿಕೆ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ಕೆಲವು ಹಾಲಿ ಶಾಸಕರಿಗೂ ಟಿಕೆಟ್ ಕೈತಪ್ಪಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ಕೋರ್ ಕಮಿಟಿಯ ಸಭೆ ಏಪ್ರಿಲ್ 4ರ ಬಳಿಕ ನಡೆಯಲಿದೆ. ಅಭಿಪ್ರಾಯ ಸಂಗ್ರಹದ ಬಳಿಕ ಶಾರ್ಟ್ ಲಿಸ್ಟ್ ಸೆಂಟ್ರಲ್ ಕೋರ್ ಕಮಿಟಿಗೆ ಹೋಗಲಿದೆ. ಹಾಲಿ ಶಾಸಕರಲ್ಲಿ ಯಾರಿಗೆ ಟಿಕೆಟ್ ನೀಡಬೇಕು, ಯಾರಿಗೆ ನೀಡಬಾರದು ಎನ್ನುವ ಕುರಿತು ಬಿಜೆಪಿ ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು