8:20 AM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಕೊರೊನಾ, ಝೀಕಾ ವೈರಸ್ ಭೀತಿ: ದ.ಕ. ಜಿಲ್ಲೆಯ ಕೇರಳ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ; ಆರ್‌ಟಿಪಿಸಿಆರ್ ಕಡ್ಡಾಯ

13/07/2021, 20:52

ಮಂಗಳೂರು(reporterkarnataka news): ಕೇರಳದಲ್ಲಿ ಸೊಳ್ಳೆಯಿಂದ ಹರಡುವ ಝೀಕಾ ವೈರಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಚಾಮರಾಜನಗರ ಹಾಗೂ ಕರ್ನಾಟಕ ಕೇರಳ ಗಡಿ ಪ್ರದೇಶದಲ್ಲಿ ಎಚ್ಚರಿಕೆ ವಹಿಸುವಂತೆ ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತರು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ತಾಗಿಕೊಂಡಿರುವ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ನೆರೆಯ ಕೇರಳದಲ್ಲಿ ವೈರಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಈಡಿಸ್‌ ರೋಗವಾಹಕ ಸೊಳ್ಳೆಗಳ ನಿಯಂತ್ರಣಕ್ಕೆ ನಿಗಾ ವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಈಗಾಗಲೇ ಸೂಚನೆ ನೀಡಿದ್ದಾರೆ.

ಕೇರಳದಿಂದ ದ.ಕ. ಜಿಲ್ಲೆಗೆ ಆಗಮಿಸುವವರ ತಪಾಸಣೆಗೆ ಸಂಬಂಧಿಸಿ ಈಗಾಗಲೇ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಅಥವಾ ಕೋವಿಡ್ ಲಸಿಕಾ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿಲಾಗಿದೆ. ಉಳಿದಂತೆ ಝೀಕಾಕ್ಕೆ ಸಂಬಂಧಿಸಿ ಹೊಸ ಮಾರ್ಗಸೂಚಿ ಜಾರಿ ಮಾಡಿಲ್ಲ.

ಸೊಳ್ಳೆಗಳಿಂದ ಈ ವೈರಸ್ ಹರಡುವುದರಿಂದ ರಾಜ್ಯದಿಂದ ಬರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಈ ಝೀಕಾ ವೈರಸ್‌ನ ಗುಣಲಕ್ಷಣಗಳನ್ನು ಪತ್ತೆಹಚ್ಚುವುದು ಕ್ಲಿನಿಕಲ್ ಆಧಾರದಲ್ಲಿ ಮಾಡಬೇಕಾಗುತ್ತದೆ. ಈ ಬಗ್ಗೆ ಯಾವುದೇ ಗಾಬರಿ ಬೇಡ. ಗಡಿಗಳಲ್ಲಿ ಈ ಬಗ್ಗೆ ಇನ್ನೂ ಹೆಚ್ಚಿನ ರೀತಿಯ ಯಾವ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ 
ಈಗಾಗಲೇ ತಿಳಿಸಿದ್ದಾರೆ.

ಈ ಮಧ್ಯೆ ಡಿಸಿಪಿ ಹರಿರಾಂ ಶಂಕರ್ ಅವರು ಕೇರಳ – ಕರ್ನಾಟಕ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಹಾಗೂ ಕೇರಳದಿಂದ ಬರುವವರಿಗೆ ಆರ್ ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು