5:38 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಕೊರೊನಾ, ಝೀಕಾ ವೈರಸ್ ಭೀತಿ: ದ.ಕ. ಜಿಲ್ಲೆಯ ಕೇರಳ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ; ಆರ್‌ಟಿಪಿಸಿಆರ್ ಕಡ್ಡಾಯ

13/07/2021, 20:52

ಮಂಗಳೂರು(reporterkarnataka news): ಕೇರಳದಲ್ಲಿ ಸೊಳ್ಳೆಯಿಂದ ಹರಡುವ ಝೀಕಾ ವೈರಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಚಾಮರಾಜನಗರ ಹಾಗೂ ಕರ್ನಾಟಕ ಕೇರಳ ಗಡಿ ಪ್ರದೇಶದಲ್ಲಿ ಎಚ್ಚರಿಕೆ ವಹಿಸುವಂತೆ ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತರು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ತಾಗಿಕೊಂಡಿರುವ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ನೆರೆಯ ಕೇರಳದಲ್ಲಿ ವೈರಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಈಡಿಸ್‌ ರೋಗವಾಹಕ ಸೊಳ್ಳೆಗಳ ನಿಯಂತ್ರಣಕ್ಕೆ ನಿಗಾ ವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಈಗಾಗಲೇ ಸೂಚನೆ ನೀಡಿದ್ದಾರೆ.

ಕೇರಳದಿಂದ ದ.ಕ. ಜಿಲ್ಲೆಗೆ ಆಗಮಿಸುವವರ ತಪಾಸಣೆಗೆ ಸಂಬಂಧಿಸಿ ಈಗಾಗಲೇ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಅಥವಾ ಕೋವಿಡ್ ಲಸಿಕಾ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿಲಾಗಿದೆ. ಉಳಿದಂತೆ ಝೀಕಾಕ್ಕೆ ಸಂಬಂಧಿಸಿ ಹೊಸ ಮಾರ್ಗಸೂಚಿ ಜಾರಿ ಮಾಡಿಲ್ಲ.

ಸೊಳ್ಳೆಗಳಿಂದ ಈ ವೈರಸ್ ಹರಡುವುದರಿಂದ ರಾಜ್ಯದಿಂದ ಬರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಈ ಝೀಕಾ ವೈರಸ್‌ನ ಗುಣಲಕ್ಷಣಗಳನ್ನು ಪತ್ತೆಹಚ್ಚುವುದು ಕ್ಲಿನಿಕಲ್ ಆಧಾರದಲ್ಲಿ ಮಾಡಬೇಕಾಗುತ್ತದೆ. ಈ ಬಗ್ಗೆ ಯಾವುದೇ ಗಾಬರಿ ಬೇಡ. ಗಡಿಗಳಲ್ಲಿ ಈ ಬಗ್ಗೆ ಇನ್ನೂ ಹೆಚ್ಚಿನ ರೀತಿಯ ಯಾವ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ 
ಈಗಾಗಲೇ ತಿಳಿಸಿದ್ದಾರೆ.

ಈ ಮಧ್ಯೆ ಡಿಸಿಪಿ ಹರಿರಾಂ ಶಂಕರ್ ಅವರು ಕೇರಳ – ಕರ್ನಾಟಕ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಹಾಗೂ ಕೇರಳದಿಂದ ಬರುವವರಿಗೆ ಆರ್ ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು