10:35 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕೊರೊನಾ, ಝೀಕಾ ವೈರಸ್ ಭೀತಿ: ದ.ಕ. ಜಿಲ್ಲೆಯ ಕೇರಳ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ; ಆರ್‌ಟಿಪಿಸಿಆರ್ ಕಡ್ಡಾಯ

13/07/2021, 20:52

ಮಂಗಳೂರು(reporterkarnataka news): ಕೇರಳದಲ್ಲಿ ಸೊಳ್ಳೆಯಿಂದ ಹರಡುವ ಝೀಕಾ ವೈರಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಚಾಮರಾಜನಗರ ಹಾಗೂ ಕರ್ನಾಟಕ ಕೇರಳ ಗಡಿ ಪ್ರದೇಶದಲ್ಲಿ ಎಚ್ಚರಿಕೆ ವಹಿಸುವಂತೆ ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತರು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ತಾಗಿಕೊಂಡಿರುವ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ನೆರೆಯ ಕೇರಳದಲ್ಲಿ ವೈರಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಈಡಿಸ್‌ ರೋಗವಾಹಕ ಸೊಳ್ಳೆಗಳ ನಿಯಂತ್ರಣಕ್ಕೆ ನಿಗಾ ವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಈಗಾಗಲೇ ಸೂಚನೆ ನೀಡಿದ್ದಾರೆ.

ಕೇರಳದಿಂದ ದ.ಕ. ಜಿಲ್ಲೆಗೆ ಆಗಮಿಸುವವರ ತಪಾಸಣೆಗೆ ಸಂಬಂಧಿಸಿ ಈಗಾಗಲೇ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಅಥವಾ ಕೋವಿಡ್ ಲಸಿಕಾ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿಲಾಗಿದೆ. ಉಳಿದಂತೆ ಝೀಕಾಕ್ಕೆ ಸಂಬಂಧಿಸಿ ಹೊಸ ಮಾರ್ಗಸೂಚಿ ಜಾರಿ ಮಾಡಿಲ್ಲ.

ಸೊಳ್ಳೆಗಳಿಂದ ಈ ವೈರಸ್ ಹರಡುವುದರಿಂದ ರಾಜ್ಯದಿಂದ ಬರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಈ ಝೀಕಾ ವೈರಸ್‌ನ ಗುಣಲಕ್ಷಣಗಳನ್ನು ಪತ್ತೆಹಚ್ಚುವುದು ಕ್ಲಿನಿಕಲ್ ಆಧಾರದಲ್ಲಿ ಮಾಡಬೇಕಾಗುತ್ತದೆ. ಈ ಬಗ್ಗೆ ಯಾವುದೇ ಗಾಬರಿ ಬೇಡ. ಗಡಿಗಳಲ್ಲಿ ಈ ಬಗ್ಗೆ ಇನ್ನೂ ಹೆಚ್ಚಿನ ರೀತಿಯ ಯಾವ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ 
ಈಗಾಗಲೇ ತಿಳಿಸಿದ್ದಾರೆ.

ಈ ಮಧ್ಯೆ ಡಿಸಿಪಿ ಹರಿರಾಂ ಶಂಕರ್ ಅವರು ಕೇರಳ – ಕರ್ನಾಟಕ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಹಾಗೂ ಕೇರಳದಿಂದ ಬರುವವರಿಗೆ ಆರ್ ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು