9:26 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ದಿಢೀರ್ ದಾಳಿ: ಒಂದೂವರೆ ತಾಸು ತಪಾಸಣೆ; ಬೀಡಿ, ಸಿಗರೇಟ್ ಮಾತ್ರ ಪತ್ತೆ

02/04/2023, 18:26

ಮಂಗಳೂರು(reporterkarnataka.com):ರಾಜ್ಯ ವಿಧಾನ ಸಭೆಯ ಚುನಾವಣೆಯ ಹಿನ್ನಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ದೃಷ್ಟಿಯಿಂದ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ ಪೊಲೀಸರ ತಂಡ ನಗರದ ಜಿಲ್ಲಾ ಕಾರಾಗೃಹಕ್ಕೆ ದಾಳಿ ನಡೆಸಿ ತಪಾಸಣೆ ನಡೆಸಿತು.
ಹಿರಿಯ ಅಧಿಕಾರಿಗಳು ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


ದಾಳಿಯ ನಂತರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಮಾಧ್ಯಮದ ಜತೆಮಾತನಾಡಿ, ಜೈಲಿನಲ್ಲಿ ಬೀಡಿ ಮತ್ತು ಸಿಗರೇಟ್ ಹೊರತುಪಡಿಸಿ ಯಾವುದೇ ನಿಷೇಧಿತ ವಸ್ತುಗಳು ಪೊಲೀಸರಿಗೆ ಸಿಗಲಿಲ್ಲ. ಒಂದೂವರೆ ಗಂಟೆಯೊಳಗೆ ತಪಾಸಣೆ ಪೂರ್ಣಗೊಂಡಿತು. ಜೈಲಿನೊಳಗೆ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳಲು ಬರುವ ದಿನಗಳಲ್ಲಿ ಇಂತಹ ದಾಳಿಗಳನ್ನು ನಡೆಸಲಾಗುವುದು ಎಂದರು.
ಬೀಡಿ, ಸಿಗರೇಟ್‌ಗಳು ಕೈದಿಗಳಿಗೆ ಹೇಗೆ ರವಾನೆ ಆಗುತ್ತವೆ. ಎಂಬುದರ ಕುರಿತು ಜೈಲು ಅಧೀಕ್ಷಕರ ಜತೆಗೆ ಚರ್ಚೆ ಮಾಡಲಾಯಿತು. ಸಂಬಂಧಿಕರು ಮತ್ತು ಕುಟುಂಬ ಸದಸ್ಯರ ಭೇಟಿಯ ಸಮಯದಲ್ಲಿ ಅದನ್ನು ಪೂರೈಸಲಾಗುತ್ತದೆ ಎಂದು ತಿಳಿಸಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು