2:16 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬಂಟ್ವಾಳ: ಬರಿಮಾರು ಗ್ರಾಪಂ ಸದಸ್ಯ ಸಹಿತ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

04/04/2023, 20:33

ಬಂಟ್ವಾಳ(reporterkarnataka.com):
ಬರಿಮಾರು ಗ್ರಾಪಂ ಪಕ್ಷೇತರ ಸದಸ್ಯ ಹರಿಕೃಷ್ಣ ಬರಿಮಾರು, ಗುರುಪ್ರಸಾದ್, ಶರತ್,ಲತೀಶ್, ಯಶೋಧರ ಅವರು ಶಾಸಕ ರಾಜೇಶ್ ನಾಯ್ಕ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ಅವರಿಗೆ ಪಕ್ಷದ ಶಾಲು ಹಾಕಿ ಶಾಸಕ ರಾಜೇಶ್ ನಾಯ್ಕ್ ಹಾಗೂ ಪಕ್ಷದ ಅಧ್ಯಕ್ಷ ದೇವಪ್ಪ ಪೂಜಾರಿ ಅವರು ಬರಮಾಡಿಕೊಂಡರು.
ಬಿಜೆಪಿ ಪಕ್ಷದಲ್ಲಿ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ಹರಿಕೃಷ್ಣ ಬರಿಮಾರು ಅವರು ಕಳೆದ ಗ್ರಾಪಂ ಚುನಾವಣಾ ಸಂದರ್ಭದಲ್ಲಿ ಪಕ್ಷದಿಂದ ಹೊರಬಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿ ಅ ಬಳಿಕ ದ ದಿನಗಳಲ್ಲಿ ಬಿಜೆಪಿ ಪಕ್ಷದಿಂದ ದೂರ ಇದ್ದರು. ಆದರೆ 2023ರ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕರ ಅಭಿವೃದ್ಧಿಯನ್ನು ಹಾಗೂ ಪಕ್ಷದ ಮೇಲಿನ ಅಭಿಮಾನದಿಂದ ಮತ್ತೆ ಬಿಜೆಪಿಯತ್ತ ಮುಖಮಾಡಿದ್ದಾರೆ.
ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಪ್ರಮುಖರಾದ ಸುದರ್ಶನ ಬಜ, ರವೀಶ್ ಶೆಟ್ಟಿ ಕರ್ಕಳ, ಗಣೇಶ್ ರೈ ಮಾಣಿ, ರಮನಾಥ ರಾಯಿ, ಪ್ರಕಾಶ್ ಆಂಚನ್, ಮೋಹನ್ ಪಿ.ಎಸ್.ಕಮಲಾಕ್ಷಿ ಪೂಜಾರಿ, ಸದಾಶಿವ ಬರಿಮಾರು,ಜಯಂತ್ ಮುಳಿಬೈಲು, ದಿನೇಶ್ ಶೆಟ್ಟಿ ದಂವೆದಾರ್, ಯಶೋಧರ ಕರ್ಬೆಟ್ಟು ಉದಯ ಕಾಂಜಿಲ, ಅಜಿತ್ ಶೆಟ್ಟಿ ಕಾವಳಮೂಡೂರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು