2:17 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಮಣ್ಣು ತೆಗೆಯುವ ಜೆಸಿಬಿಯಿಂದ ಚರಂಡಿ ತುಂಬಿದ ನೀರು ಎತ್ತುವುದು!!: ಮಂಗಳೂರು ಸ್ಮಾರ್ಟ್ ಸಿಟಿಗೆ ಈ ಬಾರಿ ಪ್ರಶಸ್ತಿ ಗ್ಯಾರಂಟಿ! 

13/07/2021, 22:07

ಮಂಗಳೂರು(reporterkarnatakanews): ಮಂಗಳೂರು ಸ್ಮಾರ್ಟ್ ಸಿಟಿ ತಂತ್ರಜ್ಞಾನದಲ್ಲಿ ಎಷ್ಟೊಂದು ಮುಂದುವರಿದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಮಣ್ಣು ಅಗೆಯುವುದು ಜೆಸಿಬಿಯಿಂದ ಇಲ್ಲಿನ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಹೊಂಡ, ಚರಂಡಿಯಲ್ಲಿ ನಿಂತ ಮಳೆ ನೀರನ್ನು ತೆಗೆಯುತ್ತಾರೆ!


ನಗರದ ಸ್ಟೇಟ್ ಬ್ಯಾಂಕ್ ಬಳಿಯ ರಸ್ತೆಗೆ ಒಳಚರಂಡಿ ನಿರ್ಮಿಸುವ ಕಾರ್ಯ ತಿಂಗಳುಗಟ್ಟಲೆಯಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಕಳೆದ ಮೂರು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸ್ಮಾರ್ಟ್ ಸಿಟಿಯಡಿ ಅಗೆದು ಹಾಕಿದ ಹೊಂಡಗಳಲ್ಲಿ ಕೆಸರು ನೀರು ತುಂಬಿದೆ. ಕಳೆದ ಕೆಲವು ದಿನಗಳಿಂದ ಚರಂಡಿ ತುಂಬಿದ ನೀರನ್ನು ಜೆಸಿಬಿ ಮೂಲಕ ಖಾಲಿ ಮಾಡುವ ಕೆಲಸ ನಡೆಯುತ್ತಿದೆ. ಆದರೆ ಜೆಸಿಬಿ ಮೂಲಕ ಎತ್ತಿ ಅಲ್ಲೇ ಬದಿಗೆ ಸುರಿಯುವ ನೀರು ಮತ್ತೆ ಅದೇ ಚರಂಡಿ ಸೇರುತ್ತಿದೆ. ಆಧುನಿಕ ತಂತ್ರಜ್ಞಾನ ಬಳಕೆಗೆ ಈ ಬಾರಿ ಮಂಗಳೂರು ಸ್ಮಾರ್ಟ್ ಸಿಟಿಗೆ ಪ್ರಶಸ್ತಿ ಗ್ಯಾರಂಟಿ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು