10:27 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಮಣ್ಣು ತೆಗೆಯುವ ಜೆಸಿಬಿಯಿಂದ ಚರಂಡಿ ತುಂಬಿದ ನೀರು ಎತ್ತುವುದು!!: ಮಂಗಳೂರು ಸ್ಮಾರ್ಟ್ ಸಿಟಿಗೆ ಈ ಬಾರಿ ಪ್ರಶಸ್ತಿ ಗ್ಯಾರಂಟಿ! 

13/07/2021, 22:07

ಮಂಗಳೂರು(reporterkarnatakanews): ಮಂಗಳೂರು ಸ್ಮಾರ್ಟ್ ಸಿಟಿ ತಂತ್ರಜ್ಞಾನದಲ್ಲಿ ಎಷ್ಟೊಂದು ಮುಂದುವರಿದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಮಣ್ಣು ಅಗೆಯುವುದು ಜೆಸಿಬಿಯಿಂದ ಇಲ್ಲಿನ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಹೊಂಡ, ಚರಂಡಿಯಲ್ಲಿ ನಿಂತ ಮಳೆ ನೀರನ್ನು ತೆಗೆಯುತ್ತಾರೆ!


ನಗರದ ಸ್ಟೇಟ್ ಬ್ಯಾಂಕ್ ಬಳಿಯ ರಸ್ತೆಗೆ ಒಳಚರಂಡಿ ನಿರ್ಮಿಸುವ ಕಾರ್ಯ ತಿಂಗಳುಗಟ್ಟಲೆಯಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಕಳೆದ ಮೂರು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸ್ಮಾರ್ಟ್ ಸಿಟಿಯಡಿ ಅಗೆದು ಹಾಕಿದ ಹೊಂಡಗಳಲ್ಲಿ ಕೆಸರು ನೀರು ತುಂಬಿದೆ. ಕಳೆದ ಕೆಲವು ದಿನಗಳಿಂದ ಚರಂಡಿ ತುಂಬಿದ ನೀರನ್ನು ಜೆಸಿಬಿ ಮೂಲಕ ಖಾಲಿ ಮಾಡುವ ಕೆಲಸ ನಡೆಯುತ್ತಿದೆ. ಆದರೆ ಜೆಸಿಬಿ ಮೂಲಕ ಎತ್ತಿ ಅಲ್ಲೇ ಬದಿಗೆ ಸುರಿಯುವ ನೀರು ಮತ್ತೆ ಅದೇ ಚರಂಡಿ ಸೇರುತ್ತಿದೆ. ಆಧುನಿಕ ತಂತ್ರಜ್ಞಾನ ಬಳಕೆಗೆ ಈ ಬಾರಿ ಮಂಗಳೂರು ಸ್ಮಾರ್ಟ್ ಸಿಟಿಗೆ ಪ್ರಶಸ್ತಿ ಗ್ಯಾರಂಟಿ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು